LATEST NEWS
ಕೃಷಿ ಕಾಯ್ದೆ – ಮೋದಿ ಒಂದು ಹೆಜ್ಜೆ ಹಿಂದೆ ಇಟ್ಟಿದ್ದಾರೆ ಎಂದರೆ ಎರಡು ಹೆಜ್ಜೆ ಮುಂದಕ್ಕೆ ಇಡುತ್ತಾರೆ ಎಂದು ಅರ್ಥ – ಪ್ರಭಾಕರ್ ಭಟ್
ಉಡುಪಿ ನವೆಂಬರ್ 21: ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾಯ್ದೆ ಹಿಂಪಡೆದಿರುವ ಬಗ್ಗೆ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರತಿಕ್ರಿಯಿಸಿದ್ದು, ಮೋದಿ ಒಂದು ಹೆಜ್ಜೆ ಹಿಂದೆ ಇಟ್ಟಿದ್ದಾರೆ ಎಂದರೆ ಎರಡು ಹೆಜ್ಜೆ ಮುಂದಕ್ಕೆ ಇಡುತ್ತಾರೆ ಎಂದು ಅರ್ಥ ಎಂದು ಅವರು ಮಾರ್ಮಿಕವಾಗಿ ನುಡಿದಿದ್ದಾರೆ.
ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕೃಷಿ ಕಾಯ್ದೆಗಳು ಜನಮಾನಸಕ್ಕೆ ಮುಟ್ಟಬೇಕು ಎಂದು ಒಂದು ವರ್ಷ ಕಾದರೂ ಪ್ರಯೋಜನವಾಗಲಿಲ್ಲ. ಹಾಗಾಗಿ, ಜನಸಾಮಾನ್ಯರಿಗೆ ತೊಂದರೆಯಾಗಬಾರದು ಎಂದು ರೈತರ ಪರವಾಗಿದ್ದ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಪಾಪಸ್ ಪಡೆದಿದೆ.
ಸರ್ಕಾರದ ನಿರ್ಧಾರ ಉತ್ತಮವಾಗಿದೆ ಎಂದು ಸಮರ್ಥಿಸಿಕೊಂಡರು. ವಿಪಕ್ಷಗಳು ವಿರೋಧಿ ಪಕ್ಷಗಳಾಗಿದ್ದು, ಸರ್ಕಾರದ ಎಲ್ಲ ಕಾರ್ಯಗಳನ್ನು ವಿರೋಧಿಸುತ್ತಿವೆ. ಭಿನ್ನ ಅಭಿಪ್ರಾಯಗಳಿದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆಗಳು ನಡೆಯಬೇಕು. ಆದರೆ, ವಿರೋಧ ಪಕ್ಷಗಳು ಹಾಗೂ ಪ್ರತಿಭಟನಾಕಾರರು ಸರ್ಕಾರದ ಜತೆಗೆ ಚರ್ಚೆಗೆ ಸಿದ್ಧರಿಲ್ಲ. ಮುಂದೆ, ಚರ್ಚೆ, ಮಾತುಕತೆ ಹಾಗೂ ತಿದ್ದುಪಡಿಗಳೊಂದಿಗೆ ಮತ್ತೆ ಕೃಷಿ ಕಾಯ್ದೆಗಳನ್ನು ಅನುಷ್ಠಾನಕ್ಕೆ ತರಲಿದೆ ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.
You must be logged in to post a comment Login