LATEST NEWS
ಕೇರಳ ಮತ್ತು ಮುಂಬೈಯಿಂದ ಬರುವವರಿಗೆ ಆರ್.ಟಿ.ಪಿ.ಸಿ.ಆರ್ ಕಡ್ಡಾಯ : ಸಂಸದೆ ಶೋಭಾ
ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ರೂಪಾಂತರ ವೈರಸ್ ಹರಡದಂತೆ ಮುನ್ನೆಚ್ಚರಿಕೆಯಾಗಿ , ಜಿಲ್ಲೆಗೆ ಕೇರಳ ಮತ್ತು ಮುಂಬೈಯಿಂದ ಬರುವವರ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ವರದಿಯನ್ನು ಕಡ್ಡಾಯವಾಗಿ ಪರಿಶೀಲನೆ ನಡೆಸುವಂತೆ ಸಂಸದೆ ಶೋಭಾ ಕರಂದ್ಲಾಜೆ ಸೂಚಿಸಿದರು.
ರೂಪಾಂತರಿ ಕೋವಿಡ್ ವೈರಸ್ ಹರಡುವುದನ್ನು ತಡೆಯಲು ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ, ಈ ಹಿಂದೆ ಕೋವಿಡ್ ಚಕಿತ್ಸೆಗೆ ಗುರುತಿಸಿದ್ದ ಆಸ್ಪತ್ರೆಗಳಲ್ಲಿ , ಚಿಕಿತ್ಸೆ ನೀಡಲು ಬೇಕಾದ ಎಲ್ಲಾ ಅಗತ್ಯ ಸಿದ್ದತೆಗಳನ್ನು ಹಾಗೂ ಉಪಕರಣಗಳನ್ನು ಸಿದ್ದ ಮಾಡಿಟ್ಟುಕೊಳ್ಳಿ, ಸಾರ್ವಜನಿಕರು ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವುದರ ಕುರಿತಂತೆ ಹೆಚ್ಚು ಜಾಗೃತಿ ಮೂಡಿಸಿ, ಬಾಂಬೆ ಮತ್ತು ಕೇರಳದಿಂದ ಬರುವವರು 72 ಗಂಟೆಗಳ ಮೊದಲು ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ವರದಿ ಪಡೆದಿರುವ ಕುರಿತು ಪರಿಶೀಲನೆ ನಡೆಸಿ ಎಂದರು.
ಜಿಲ್ಲೆಯಲ್ಲಿ ಇದುವರೆಗೆ 359039 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಿದ್ದು, 335501 ನೆಗೆಟಿವ್ ವರದಿ ಬಂದಿದೆ, 23538 ಮಂದಿ ಪಾಸಿಟಿವ್ ಬಂದಿದ್ದು, 189 ಮಂದಿ ಮೃತಪಟ್ಟಿದ್ದಾರೆ, ಇಷ್ಟೊಂದು ಪ್ರಮಾಣದ ಪಾಸಿಟಿವ್ ಇದ್ದರೂ ಸಹ ಜಿಲ್ಲೆಯಲ್ಲಿನ ಮರಣ ಪ್ರಮಾಣ ರಾಜ್ಯದಲ್ಲೇ ಅತ್ಯಂತ ಕಡಿಮೆಯಿದ್ದು ಇದಕ್ಕಾ ಕಾರಣವಾದ ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಯನ್ನು ಅಭಿನಂದಿಸುವುದಾಗಿ ಡಿಸಿ ಜಿ.ಜಗದೀಶ್ ಹೇಳಿದರು.
ಜಿಲ್ಲೆಯಲ್ಲಿ ನರೇಗಾ ಯೋಜನೆಯಲ್ಲಿ 51000 ಮಾನವದಿನಗಳ ಸೃಜನೆಯ ಗುರಿಗೆ 51200 ಸಾಧನೆ ಮಾಡಿರುವುದನ್ನು ಅಭಿನಂದಿಸಿದ ಸಂಸದರು, ಜಿಲ್ಲೆಯಲ್ಲಿ ಹೊಸದಾಗಿ ಆಯ್ಕೆಯದ ಗ್ರಾಮ ಪಂಚಾಯತ್ ಸದಸ್ಯರಿಗೆ ನರೇಗಾದಲ್ಲಿ ಕೈಗೊಳ್ಲಬಹುದಾದ ಕಾರ್ಯಗಳ ಕುರಿತು ವಿವರವಾದ ಮಾಹಿತಿ ನೀಡಿ,. ಹೆಚ್ಚಿನ ಸಂಖ್ಯೆಯಲ್ಲಿ ಕೆರೆ ಮತ್ತು ತೋಡುಗಳ ಹೊಳೆತ್ತಲು ಕ್ರಮ ಕೈಗೊಳ್ಳಿ ಇದರಿಂದ ಮಳೆಗಾಲದಲ್ಲಿ ನೀರು ಸಂಗ್ರಹಿಸಲು ಹಾಗೂ ನೀರು ಸರಾಗವಾಗಿ ಹರಿದುಹೋಗಲು ಸಆಧ್ಯವಾಗಲಿದೆ ಎಂದರು.
Facebook Comments
You may like
ಮುಕೇಶ್ ಅಂಬಾನಿ ನಿವಾಸದ ಬಳಿ ಜಿಲೆಟಿನ್ ಸ್ಪೋಟ ಪತ್ತೆ
ಕೇರಳ ಮೀನುಗಾರರೊಂದಿಗೆ ಸಮುದ್ರದಲ್ಲಿ ಈಜಾಡಿ ಸಂಭ್ರಮಿಸಿದ ರಾಹುಲ್ ಗಾಂಧಿ
ಮಹಾರಾಷ್ಟ್ರದಲ್ಲಿ ಕರೊನಾ ಹಾವಳಿ : ಪೊಲೀಸರಿಗೆ ವರ್ಕ್ಫ್ರಮ್ ಹೋಮ್!
ಕೇರಳ ಗಡಿ ಬಂದ್ – ಪ್ರಧಾನಿ ಮಧ್ಯಪ್ರವೇಶಕ್ಕೆ ಕೇರಳ ಸಿಎಂ ಒತ್ತಾಯ
‘ಮೆಟ್ರೋ ಮ್ಯಾನ್’ ಶ್ರೀಧರನ್ ಬಳಿಕ ಬಿಜೆಪಿ ಪಡೆ ಸೇರುವರೇ ಪಿ.ಟಿ. ಉಷಾ..?
19 ವರ್ಷದ ಆನೆಯನ್ನು ಮರಕ್ಕೆ ಕಟ್ಟಿಹಾಕಿ ಕೋಲಿನಿಂದ ಭಾರಿಸಿದ ಮಾವುತ…ವಿಡಿಯೋ ವೈರಲ್
You must be logged in to post a comment Login