Connect with us

    BANTWAL

    ಬಂಟ್ವಾಳದಲ್ಲಿ ಚಲಿಸುತ್ತಿದ್ದ ಸರ್ಕಾರಿ ಬಸ್ ಟಯರ್ ಒಡೆದು ಸೃಷ್ಟಿಸಿತ್ತು ಆತಂಕ..!

    ಬಂಟ್ವಾಳ : ಟಯರ್ ಒಡೆದು ಹೋದ ಪರಿಣಾಮ, ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ನಿಲ್ಲಿಸಿದ್ದ ರಿಕ್ಷಾ ಕ್ಕೆ ಡಿಕ್ಕಿಯಾಗಿ ಬಳಿಕ ಚರಂಡಿಗೆ ಬಿದ್ದು ನಾಲ್ವರು ಪ್ರಯಾಣಿಕರು ಗಾಯಗೊಂಡ ಘಟನೆ ಬಂಟ್ವಾಳ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಎನ್.ಸಿ.ರೋಡ್ ಎಂಬಲ್ಲಿ ಸೋಮವಾರ ಸಂಜೆ ವೇಳೆ ನಡೆದಿದೆ.

    ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ಧ ಕೆ‌ಎಸ್.ಆರ್.ಟಿಸಿ ಬಸ್ ನ ಟಯರ್ ಕಾವಳಮೂಡೂರು ಎನ್.ಸಿ.ರೋಡ್ ತಲುಪುತ್ತಿದ್ಧಂತೆ ಸ್ಪೋಟಗೊಂಡಿದೆ. ಟಯರ್ ಒಡೆದು ಹೋದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿ ನಿಲ್ಲಿಸಲಾಗಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾ ಪಲ್ಟಿಯಾಗಿದೆ.

     

    ಅದೃಷ್ಟವಶಾತ್ ರಿಕ್ಷಾದಲ್ಲಿ ಬಾಡಿಗೆ ಮಾಡಿಕೊಂಡು ಬಂದಿದ್ದ ಪ್ರಯಾಣಿಕರು ಅಂಗಡಿಗೆ ಹೋಗಿದ್ದರಿಂದ ಸೇಫ್ ಆಗಿದ್ದಾರೆ. ಬಳಿಕ ಬಸ್ ಚರಂಡಿಗೆ ಬಿದ್ದು ಪಲ್ಟಿಯಾಗಿದೆ. ಸಂಚಾರಿ ಪೊಲೀಸರು ಸ್ತಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply