LATEST NEWS
ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ಬಹುಮಾನ – ಪ್ರತಿಭಾ ಕುಳಾಯಿ
ಮಂಗಳೂರು: ವೀರ ಪುರುಷರಾದ ಕೋಟಿಚೆನ್ನಯ್ಯರ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಅವರ ಮುಖಕ್ಕೆ ಮಸಿ ಬಳಿದರೆ ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಕಾಂಗ್ರೇಸ್ ನಾಯಕಿ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ.
ಜನಾರ್ದನ ಪೂಜಾರಿ ಮತ್ತು ಬಿಲ್ಲವರ ಆರಾಧ್ಯ ದೈವ ಕೋಟಿ ಚೆನ್ನಯ್ಯರ ವಿರುದ್ಧ ದಕ್ಷಿಣ ಕನ್ನಡ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್, ಬಿಲ್ಲವ ನಾಯಕಿ ಪ್ರತಿಭಾ ಕುಳಾಯಿ ಫೇಸ್ಬುಕ್ ಲೈವ್ನಲ್ಲಿ ಬಂದು ಬಿಲ್ಲವ ಯುವಕರು ಯಾರೇ ಆಗಲಿ ಜಗದೀಶ್ ಅವರ ಮುಖಕ್ಕೆ ಮಸಿ ಬಳಿದರೆ ಲಕ್ಷ ರೂಪಾಯಿ ನೀಡಿರುವುದಾಗಿ ಹೇಳಿಕೆ ನೀಡಿದ್ದಾರೆ.
ಜನಾರ್ದನ ಪೂಜಾರಿ ಮತ್ತು ಕೋಟಿ ಚೆನ್ನಯ್ಯರ ವಿರುದ್ಧ ಜಗದೀಶ್ ಅಧಿಕಾರಿ ಕೀಳಾಗಿ ಮಾತನಾಡಿದ್ದಾರೆ. ಅವರು ನಾಲ್ಕು ದಿನಗಳ ಒಳಗೆ ಅಧಿಕಾರಿ ಕ್ಷಮೆ ಯಾಚಿಸಬೇಕು. ಗರೋಡಿಗೆ ಹೋಗಿ ಕ್ಷಮೆ ಕೇಳಬೇಕು, ಜನಾರ್ದನ ಪೂಜಾರಿ ಕಾಲಿಗೆ ಬಿದ್ದು ಕ್ಷಮೆ ಕೇಳಬೇಕು ಎಂದು ಪ್ರತಿಭಾ ಒತ್ತಾಯ ಮಾಡಿದ್ದಾರೆ. ಒಂದು ವೇಳೆ ಹೀಗೆ ಮಾಡದೇ ಹೋದರೆ ಅವರ ಮುಖಕ್ಕೆ ಮಸಿ ಬಳಿಯುವ ಬಿಲ್ಲವ ಯುವಕರಿಗೆ ಒಂದು ಲಕ್ಷ ನೀಡುವುದಾಗಿ ಹೇಳಿದ್ದಾರೆ.
You must be logged in to post a comment Login