Connect with us

    LATEST NEWS

    ಶಬರಿಮಲೆಯಲ್ಲಿ ಮತ್ತೆ ಸ್ತ್ರೀಯರಿಗೆ ಪ್ರವೇಶವಿಲ್ಲ…!!

    ಕೇರಳ ಡಿಸೆಂಬರ್ 4 : ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರೂ ಪ್ರವೇಶಿಸಬಹುದೆಂದು ಎರಡು ವರ್ಷಗಳ ಸುಪ್ರೀಂಕೋರ್ಟ್‌ ಐತಿಹಾಸಿಕ ತೀರ್ಪು ನೀಡಿತ್ತು, ಈ ಸಂದರ್ಭ ಕೇರಳ ಸರಕಾರ ತನ್ನ ಪೊಲೀಸ್ ಬಲದಿಂದ ಇಬ್ಬರು ಮಹಿಳೆಯರನ್ನು ಶಬರಿಮಲೆ ದೇವಸ್ಥಾನಕ್ಕೆ ಪ್ರವೇಶ ಕೂಡ ಮಾಡಿಸಿತ್ತು, ಆದರೆ ಅದರ ನಂತರ ಶಬರಿಮಲೆ ಭಕ್ತರಿಂದ ಉಂಟಾದ ವಿರೋಧಗಳು, ಅಭಿಯಾನಗಳಿಂದ ಕೇರಳ ಸರಕಾರ ಮತ್ತೆ ತನ್ನ ಹಳೆಯ ಸಂಪ್ರದಾಯಕ್ಕೆ ಮಣೆ ಹಾಕುವಂತೆ ಮಾಡಿದೆ.


    ಪ್ರಸಕ್ತ ವರ್ಷ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರಿಗೆ ದೇಗುಲಕ್ಕೆ ಪ್ರವೇಶವಿಲ್ಲ ಎಂದು ಕೇರಳ ಪೊಲೀಸರು ಮಾರ್ಗಸೂಚಿ ಹೊರಡಿಸಿದೆ. ಎರಡು ವರ್ಷಗಳ ನಂತರ ಕೇರಳ ಸರ್ಕಾರ ಮತ್ತು ತಿರುವಂಕೂರು ದೇವಸ್ವಮ್ ಮಂಡಳಿ(ಟಿಡಿಬಿ) ಮಹಿಳೆಯರ ಪ್ರವೇಶದ ಕುರಿತು ತಮ್ಮ ನಿಲುವನ್ನು ಬದಲಾಯಿಸಿವೆ.


    ಕೇರಳ ಸರ್ಕಾರದ ಜೊತೆ ಸೇರಿಕೊಂಡು ಟಿಡಿಪಿ ಆನ್ ಲೈನ್ ಸೇವೆಗೆ ಪೋರ್ಟಲ್ ನ್ನು ಆರಂಭಿಸಿದ್ದು, ದರ್ಶನಕ್ಕೆ ವರ್ಚುವಲ್ ಸಾಲು ಇರುವಂತೆ ಇದರಲ್ಲಿ ಕೂಡ 50 ವರ್ಷಕ್ಕಿಂತ ಕೆಳಗಿರುವ ಮಹಿಳೆಯರು ಮತ್ತು ತೃತೀಯ ಲಿಂಗಿಗಳು ಹಾಗೂ 65 ವರ್ಷಕ್ಕಿಂತ ಮೇಲ್ಪಟ್ಟವರನ್ನು ದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ನಮೂದಿಸಲಾಗಿದೆ.

    ಕೇರಳ ಸರ್ಕಾರ ಈ ಹಿಂದೆ 10 ವರ್ಷಕ್ಕಿಂತ ಕೆಳಗಿರುವ ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟವರನ್ನು ಕೋವಿಡ್-19 ನಿರ್ಬಂಧ ಹಿನ್ನೆಲೆಯಲ್ಲಿ ಪ್ರವೇಶಕ್ಕೆ ಬಿಡುತ್ತಿರಲಿಲ್ಲ. ಕಳೆದ ಫೆಬ್ರವರಿಯಲ್ಲಿ ಐವರು ಸದಸ್ಯರನ್ನೊಳಗೊಂಡ ಸಮಿತಿ ಮುಂದೆ ವಾದ ಮಂಡಿಸಿದ್ದ ಟಿಡಿಪಿ ಜೈವಿಕ ನ್ಯೂನತೆಯಿಂದ ದೇವಾಲಯದೊಳಗೆ ಒಂದು ಲಿಂಗಕ್ಕೆ ಮಾತ್ರ ಪ್ರವೇಶ ನೀಡಲು ನಿರ್ಬಂಧ ವಿಧಿಸುವುದು ಸರಿಯಲ್ಲ ಎಂದು ಹೇಳಿತ್ತು.

    ಮಹಿಳೆಯರಿಗೆ ದೇವಾಲಯದೊಳಗೆ ಪ್ರವೇಶವನ್ನು ವಿರೋಧಿಸಿ 2018ರ ಸೆಪ್ಟೆಂಬರ್ ನಲ್ಲಿ ಸಲ್ಲಿಸಲಾಗಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಕೇರಳ ಸರ್ಕಾರ ಕೂಡ ವಿರೋಧಿಸಿತ್ತು. ಆದರೆ ಇದೀಗ ಹಿಂದಿನ ಯುಡಿಎಫ್ ಸರ್ಕಾರದ ನಿಲುವಿಗೆ ಬದ್ಧವಾದಂತೆ ಇಂದಿನ ಎಲ್ ಡಿಎಫ್ ಸರ್ಕಾರ ಸಾವಿರಾರು ವರ್ಷಗಳ ದೇವಾಲಯದ ಸಂಪ್ರದಾಯವನ್ನು ಕಾಪಾಡುವ ನಿಲುವಿಗೆ ಬಂದಂತೆ ಕಾಣುತ್ತಿದೆ. ಜನರಿಂದ ಸಾಕಷ್ಟು ವಿರೋಧ ಕೇಳಿಬಂದ ಹಿನ್ನೆಲೆಯಲ್ಲಿ ತನ್ನ ನಿಲುವಿನಲ್ಲಿ ಬದಲಾದಂತೆ ಕಾಣುತ್ತಿದೆ.

    ನಿಲುವಿನ ಬದಲಾವಣೆ ಬಗ್ಗೆ ಕೇಳಿದಾಗ ಟಿಡಿಪಿ ಮುಖ್ಯಸ್ಥ ಎನ್ ವಾಸು, ಪೊಲೀಸ್ ಇಲಾಖೆ ಈ ಪೋರ್ಟಲ್ ನ್ನು ನಿರ್ವಹಿಸುತ್ತದೆ. ನಮಗೆ ಈ ಮಾರ್ಗಸೂಚಿಯಲ್ಲಿ ಯಾವುದೇ ಅಧಿಕಾರವಿಲ್ಲ ಮತ್ತು ನಾವು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದರು.
    ಆದರೆ ಮಾರ್ಗಸೂಚಿ ಇದೀಗ ಕಾರ್ಯಕರ್ತರನ್ನು ಕೆರಳಿಸಿದೆ. ಸುಧಾರಣಾ ಮೌಲ್ಯಗಳನ್ನು ಸಮಾಜದಲ್ಲಿ ಮೊಳೆಕೆಯೊಡೆಯುವಂತೆ ಮಾಡುವ ಬದಲು ಗೊಡ್ಡು ಸಂಪ್ರದಾಯವನ್ನು ಪಾಲಿಸುವಲ್ಲಿ ಎಡಪಂಥೀಯ ಸರ್ಕಾರ ಬಲಪಂಥೀಯ ಯುಡಿಎಫ್ ಸರ್ಕಾರಕ್ಕಿಂತ ಮುಂದಿದೆ ಎಂಬುದನ್ನು ತೋರಿಸಿಕೊಟ್ಟಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply