KARNATAKA
ಸದಾಶಿವ ಗೌಡ ಹತ್ಯೆ ಪ್ರಕರಣ, ಸ್ಥಳ ಮಹಜರಿಗೆ ನಕ್ಸಲ್ ನಾಯಕಿ ಶ್ರೀಮತಿ @ಉಣ್ಣಿಮಾಯಾ ಬಿಗಿ ಭದ್ರತೆಯಲ್ಲಿ ಕಾರ್ಕಳಕ್ಕೆ..!
ಕಾರ್ಕಳ : ಕೇರಳದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಕ್ಸಲ್ ನಾಯಕಿ ಶ್ರೀಮತಿ ಅಲಿಯಾಸ್ ಉಣ್ಣಿಮಾಯಾ(28) ಅವಳನ್ನು ಸ್ಥಳಮಹಜರಿಗಾಗಿ ಪೊಲೀಸರು ಬಿಗಿ ಭದ್ರತೆಯಲ್ಲಿ ಕಾರ್ಕಳಕ್ಕೆ ಕರೆತಂದಿದ್ದಾರೆ.
2023ರ ನ. 7 ರಂದು ಕೇರಳ ಪೊಲೀಸರಿಗೆ ಶ್ರೀಮತಿ ಸೆರೆಸಿಕ್ಕಿದ್ದಳು.ಕೇರಳದ ವಯನಾಡು ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಶ್ರೀಮತಿ ಸೆರೆಯಾಗಿದ್ದಳು. 2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ ಸದಾಶಿವ ಗೌಡನ ಅಪಹರಣ, ಹತ್ಯೆ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಶ್ರೀಮತಿಯನ್ನು ಪೊಲೀಸರು ಕಾರ್ಕಳಕ್ಕೆ ಕರೆತಂದಿದ್ದಾರೆ. ನಕ್ಸಲ್ ನಾಯಕಿಯಾಗಿರುವ ಶ್ರೀಮತಿ ಮೂಲತಃ ಚಿಕ್ಕಮಗಳೂರಿನ ಶೃಂಗೇರಿಯ ಬೆಳಗೋಡುಕೊಡಿಗೆ ನಿವಾಸಿ. ಕೇರಳ-ಕರ್ನಾಟಕ ಗಡಿಭಾಗದಲ್ಲಿ ಆ್ಯಕ್ಟಿವ್ ಆಗಿದ್ದಳು. ಸದಾಶಿವ ಗೌಡ ಹತ್ಯೆ ನಡೆಸಿದ ಕಾರ್ಕಳ ವ್ಯಾಪ್ತಿಯ ಕಬ್ಬಿನಾಲೆಗೆ ಬಾಡಿ ವಾರೆಂಟ್ ಮೇಲೆ ಶ್ರೀಮತಿಯನ್ನು ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಶ್ರೀಮತಿ ಕರೆ ತಂದು ಘಟನಾ ಸ್ಥಳದಲ್ಲಿ ಮಹಜರು ನಡೆಸಿದ್ದಾರೆ. ಶ್ರೀಮತಿ ಮೇಲೆ ರಾಜ್ಯದ ಹಲವು ಠಾಣೆಗಳಲ್ಲಿ 9 ಪ್ರಕರಣಗಳಿವೆ.
You must be logged in to post a comment Login