Connect with us

    LATEST NEWS

    83ನೇ ಅ. ಭಾ. ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಚಂಪಾ ಆಯ್ಕೆ

    83 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಚಂಪಾ ಆಯ್ಕೆ.

    ಮಂಗಳೂರು ಸೆಪ್ಟೆಂಬರ್ 25: ಮೈಸೂರಿನಲ್ಲಿ ನಡೆಯಲಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಬಂಡಾಯ ಸಾಹಿತಿ ಪ್ರೋ. ಚಂದ್ರಶೇಖರ್ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ.

    ಮಂಗಳೂರು ಹೊರವಲಯದ ತಲಪಾಡಿಯಲ್ಲಿ ಆಯೋಜಿಸಲಾಗಿದ್ದ ಕನ್ನಡ ಸಾಹಿತ್ಯ ಪರಿಷತ್ ನ 101ನೇ ಮಹಾಸಭೆಯಲ್ಲಿ ಪ್ರೋ. ಚಂಪಾ ಅವರ ಹೆಸರಮನ್ನು ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

    ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ನ  ಅಧ್ಯಕ್ಷ ಡಾ. ಮನುಬಳಿಗಾರ ಇಂದು ನಡೆದೆ ಸಭೆಯಲ್ಲಿ ಪ್ರೋ. ಚಂದ್ರಶೇಖರ್ ಪಾಟೀಲ್ ಅವರ ಹೆಸರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಹೇಳಿದರು.

    ಮೈಸೂರು ಸಾಹಿತ್ಯ ಸಮ್ಮೇಳನಾಧ್ಯಕ್ಷರ ಸ್ಥಾನಕ್ಕೆ ಹಿರಿಯ ಸಾಹಿತಿಗಳಾದ  ವೀಣಾ ಶಾಂತೆಶ್ವರ, ಎನ್. ಆರ್ ನಾಯಕ್, ಡಾ. ಲತಾ  ರಾಜಶೇಖರ್ ಸೇರಿದಂತೆ ಸಾ.ರಾ ಅಬೂಬಕ್ಕರ್ ಅವರ ಹೆಸರು ಆಯ್ಕೆ ಪಟ್ಟಿಯಲ್ಲಿತ್ತು. ಆದರೆ ಪ್ರೋ. ಚಂಪಾ ಅವರ ಹೆಸರನ್ನು ಒಮ್ಮತದಿಂದ ಆಯ್ಕೆ ಮಾಡಲಾಯಿತೆಂದು ಅವರು ಸ್ಪಷ್ಟಪಡಿಸಿದರು.

    ಮೈಸೂರಿನಲ್ಲಿ ಇದೇ ಬರುವ ನವೆಂಬರ್ 24 ರಿಂದ  3 ದಿನಗಳ ಕಾಲ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಅವರು ಹೇಳಿದರು.

    ಕಾವೇರಿ ವಿಚಾರದಲ್ಲಿ ರಾಜ್ಯ ಸರಕಾರ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಹೇಳಿದ ಅವರು ಕಾವೇರಿ ನಿರ್ವಹಣಾ ಮಂಡಳಿಯನ್ನು ರಾಜ್ಯಸರಕಾರ ವಿರೋಧಿಸಬೇಕು ಎಂದು ಅವರು ಕರೆ ನೀಡಿದರು.

    Share Information
    Advertisement
    Click to comment

    You must be logged in to post a comment Login

    Leave a Reply