LATEST NEWS
ಸೆಲೂನ್ ಮಾಲೀಕನಿಗೆ ಚೂರಿ ಇರಿದು ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್
ಮಂಗಳೂರು ಎಪ್ರಿಲ್ 14 : ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಸೆಲೂನ್ ಮಾಲಕನಿಗೆ ಚೂರಿಯಿಂದ ಇರಿದು ಎಸ್ಕೇಪ್ ಆಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತನನ್ನು ಬಂಟ್ವಾಳ ತಾಲೂಕಿನ ಬರೀಮಾರದ ಆನಂದ ಸಪಲ್ಯ (49) ಎಂದು ಗುರುತಿಸಲಾಗಿದೆ. ಬೋಳಾರದ ಕಾಂತಿ ಹೇರ್ ಡ್ರೆಸ್ಸಸ್ ನ ಮಾಲಕ ಎಡ್ವಿನ್ ವಿನಯ್ ಕುಮಾರ್ (65) ಅವರಿಗೆ ಚೂರಿಯಿಂದ ಇರಿದ ಘಟನೆ ನಗರದ ಬೋಳಾರದ ಸರಕಾರಿ ಶಾಲೆಯ ಬಳಿ ಶನಿವಾರ ಸಂಜೆ ನಡೆದಿತ್ತು. ಮದ್ಯ ಸೇವಿಸಿದ ಅಮಲಿನಲ್ಲಿದ್ದ ಆರೋಪಿ ಆನಂದ ಸಫಲ್ಯ ಸಮೀಪದಲ್ಲೇ ಇರುವ ತನ್ನ ಮನೆಯಿಂದ ಚೂರಿ ತಂದು ಎಡ್ವಿನ್ ಅವರ ಎದೆಗೆ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
You must be logged in to post a comment Login