DAKSHINA KANNADA
ಸಂಪಾಜೆ – ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ರಕ್ಷಣಾ ತಡೆಗೊಡೆಗೆ ಕಾರು ಡಿಕ್ಕಿ – ನಾಲ್ವರು ಪೋಟೋಗ್ರಾಫರ್ ಗಂಭೀರ
ಸುಳ್ಯ ಜೂನ್ 24: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ರಕ್ಷಣಾ ಗೊಡೆಗೆ ಡಿಕ್ಕಿ ಹೊಡೆದ ಘಟನೆ ಸಂಪಾಜೆ ಬಳಿ ನಡೆದಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರದಲ್ಲಿ ತಮ್ಮ ಕೆಲಸ ಮುಗಿಸಿ ವಾಪಸ್ ಮಂಡ್ಯಕ್ಕೆ ಹೊರಟಿದ್ದರು. ಈ ವೇಳೆ ಸಂಪಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ರಕ್ಷಣಾ ಗೋಡೆಗೆ ಢಿಕ್ಕಿಯಾಗಿದೆ. ರಸ್ತೆಯ ಬದಿಯ ಕಬ್ಬಿಣದ ತಡೆಗೋಡೆಗೆ ಢಿಕ್ಕಿ ಹೊಡೆದ ಕಾರಿನೊಳಗೆ ಕಬ್ಬಿಣದ ತಡೆಗೋಡೆ ನುಗ್ಗಿದೆ. ಢಿಕ್ಕಿಯ ರಭಸಕ್ಕೆ ಕಾರು ಛಿದ್ರ ವಾಗಿದೆ. ಅಪಘಾತದ ತೀವ್ರತೆಗೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. . ಉಳಿದಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
You must be logged in to post a comment Login