ಚೆನ್ನೈ ಸೆಪ್ಟೆಂಬರ್ 03: ಸನಾತನ ಧರ್ಮ ಡೆಂಗ್ಯೂ ಮಲೇರಿಯಾ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಅವರು ನೀಡಿರುವ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ.

ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ ‘ಸನಾತನ ನಿರ್ಮೂಲನಾ ಸಮಾವೇಶ‘ದಲ್ಲಿ ಭಾಗವಹಿಸಿ ಉದಯನಿಧಿ ಸ್ಟಾಲಿನ್ ಶನಿವಾರ ಮಾತನಾಡಿದರು. ನೀವು ‘ಸನಾತನ ವಿರೋಧಿ ಸಮ್ಮೇಳನ‘ ಎಂಬುದಾಗಿ ಆಯೋಜಿಸುವ ಬದಲು ‘ಸನಾತನ ನಿರ್ಮೂಲನಾ ಸಮ್ಮೇಳನ‘ ಎಂದು ಕಾರ್ಯಕ್ರಮ ಆಯೋಜಿಸಿದ್ದು ನನಗೆ ಇಷ್ಟವಾಯಿತು ಎಂದು ಮಾತು ಆರಂಭಿಸಿದರು.
ಕೆಲವು ವಿಷಯಗಳನ್ನು ನಾವು ವಿರೋಧಿಸುವ ಬದಲು ಅವುಗಳನ್ನು ನಿರ್ಮೂಲನೆ ಮಾಡುವುದೇ ಒಳ್ಳೆಯದು. ನಾವು ಡೆಂಗಿ, ಮಲೇರಿಯಾ ಅಥವಾ ಕೋವಿಡ್ನಂತಹ ಸೋಂಕನ್ನು ವಿರೋಧಿಸಬಾರದು. ಅವುಗಳನ್ನು ನಿರ್ಮೂಲನೆ ಮಾಡಬೇಕು. ಹಾಗೆಯೇ ಸನಾತನ ಧರ್ಮವನ್ನೂ ನಾವು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ವಿರುದ್ಧ ಮಾತನಾಡಿದರು.