Connect with us

    LATEST NEWS

    ಉಳ್ಳಾಲದಲ್ಲಿ ಏರಿಕೆ ಹಾದಿಯಲ್ಲಿ ಕೊರೊನಾ ಸೊಂಕು, ನಗರಸಭಾ ವ್ಯಾಪ್ತಿಯಲ್ಲಿ ಸ್ಯಾನಿಟೈಸಿಂಗ್

    ಮಂಗಳೂರ ಜೂನ್ 27: ಉಳ್ಳಾಲ ನಗರ ಸಭಾ ವ್ಯಾಪ್ತಿಯಲ್ಲಿ ಕೊರೊನಾ ಪ್ರಕರಣಗಳು ಏರಿಕೆ ಹಿನ್ನಲೆ ಇಂದು ಕೊರೊನಾ ಹೆಚ್ಚಾಗಿ ಕಂಡು ಬಂದ ಪ್ರದೇಶ ಸೇರಿದತೆ ಉಳ್ಳಾಲ ನಗರಸಭಾ ವ್ಯಾಪ್ತಿಯ ಉಳ್ಳಾಲ ಪೇಟೆ, ತೊಕ್ಕೊಟ್ಟು ಪೇಟೆ ಸೇರಿದಂತೆ ಮುಖ್ಯ ರಸ್ತೆ ಸಂಪರ್ಕಿಸುವ ಸ್ಥಳದಲ್ಲಿ ಅಗ್ನಿಶಾಮಕ ವಾಹನದಲ್ಲಿ ಸ್ಯಾನಿಟೈಸ್ ಮಾಡುವ ಕಾರ್ಯ ಆರಂಭವಾಗಿದೆ.


    ಶಾಸಕ ಯು.ಟಿ.ಖಾದರ್ ಉಳ್ಳಾಲ ಕೋಡಿಯಲ್ಲಿ ಸ್ಯಾನಿಟೈಸ್‍ಗೆ ಚಾಲನೆ ನೀಡಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಹೊರಗಡೆ ತೆರಳುವಾಗ ಮಾಸ್ಕ್ ಧರಿಸಬೇಕು. ಜನರೊಂದಿಗೆ,ಮಾತನಾಡುವಾಗ ಅಂತರ ಕಾಯ್ದುಕೊಳ್ಳಬೇಕು ಎಂದರು. ಉಳ್ಳಾಲದ ಅಜಾದ್ ನಗರ, ಕೋಡಿ, ಬಂಗೇರ ಲೇನ್, ಪೊಲೀಸ್ ಠಾಣೆ, ಸಹರಾ ಆಸ್ಪತ್ರೆ ವ್ಯಾಪ್ತಿಯಲ್ಲಿ ಸೋಂಕು ಪತ್ತೆಯಾಗಿದ್ದು ಈ ಪ್ರದೇಶದಲ್ಲಿ ರ್‍ಯಾಂಡಮ್‌ ಆಗಿ ಪರೀಕ್ಷೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಹಾಗೆಯೇ ಉಳ್ಳಾಲದ ಮೀನುಗಾರರು, ರಿಕ್ಷಾ ಚಾಲಕರು ಮತ್ತು ಬೀದಿ ಬದಿ ವ್ಯಾಪಾರಸ್ಥರ ತಪಾಸಣೆ ನಡೆಸಲು ಕೂಡಾ ತೀರ್ಮಾನಿಸಲಾಗಿದೆ.


    ಸೋಂಕು ಹೆಚ್ಚುತ್ತಿರುವ ಕಾರಣದಿಂದಾಗಿ ಉಳ್ಳಾಲದ ಹಲವು ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಸ್ಥಗಿತ ಮಾಡುವಂತೆ ಧಾರ್ಮಿಕ ಕೇಂದ್ರಗಳ ಮುಖಂಡರ ಸಭೆ ನಡೆಸಿ ಖಾದರ್ ಅವರು ಸಲಹೆ ನೀಡಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply