Connect with us

LATEST NEWS

ಇನ್ನೂ ಪತ್ತೆಯಾಗದ ಸನ್ನಿಧಿ..ಜಿಲ್ಲಾಧಿಕಾರಿ ಭೇಟಿ…..!!

ಕುಂದಾಪುರ ಅಗಸ್ಟ್ 09: ಕಾಲುಸಂಕದಿಂದ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಸನ್ನಿಧಿ ಇನ್ನೂ ಪತ್ತೆಯಾಗಿಲ್ಲ. ಶಾಲೆ ಮುಗಿಸಿ ಮನೆಗೆ ಹೊರಟ್ಟಿದ್ದ ಸನ್ನಿದ್ದ ಮನೆ ಹತ್ತಿರುವ ಇರುವ ಕಾಲುಸಂಕ ದಾಟಲು ಹೋಗಿ ಆಯತಪ್ಪಿ ಹೊಳೆಗೆ ಬಿದಿದ್ದು, ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾಳೆ.


ಬೈಂದೂರು ತಾಲ್ಲೂಕಿನ ಕಾಲ್ತೋಡು ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು ಆಕೆಯ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು, ಸ್ಥಳೀಯರು ತೀವ್ರ ಶೋಧ ನಡೆಸುತ್ತಿದ್ದರೂ ಸನ್ನಿಧಿ ಇನ್ನೂ ಪತ್ತೆಯಾಗಿಲ್ಲ. ಚಪ್ಪರಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಸನ್ನಿಧಿ ನಿನ್ನೆ ಸೋಮವಾರ ಮನೆಗೆ ಆಯಾ ಜೊತೆ ಹಿಂತಿರುಗುವಾಗ ಬೀಜಮಕ್ಕಿ ಎಂಬಲ್ಲಿ ಈ ಅವಘಡ ನಡೆದಿದೆ. ಸ್ಥಳಕ್ಕೆ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಭೇಟಿ ಕೊಟ್ಟು ಪರಿಸ್ಥಿತಿ ಅವಲೋಕಿಸಿದ್ದಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.


ಇಂದು ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಕೂರ್ಮಾರಾವ್ ಭೇಟಿ ನೀಡಿದ್ದಾರೆ. ಈ ಸಂದರ್ಭ ಊರಿನ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಮುಂದೆ ಕಾಲ್ತೋಡು ಗ್ರಾಮಸ್ಥರು ಹೇಳಿಕೊಂಡಿದ್ದು. ಶೀಘ್ರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆಯನ್ನು ಜಿಲ್ಲಾಧಿಕಾರಿ ನೀಡಿದ್ದಾರೆ.

Share Information
Advertisement
Click to comment

You must be logged in to post a comment Login

Leave a Reply