Connect with us

LATEST NEWS

ಸತ್ಯಜಿತ್ ಸುರತ್ಕಲ್ ಇನ್ನೂ ಬಿಜೆಪಿ ಪಕ್ಷದಲ್ಲೇ ಇದ್ದಾರೆ – ಸತೀಶ್ ಕುಂಪಲ

ಮಂಗಳೂರು ಎಪ್ರಿಲ್ 02: ಸತ್ಯಜಿತ್ ಸುರತ್ಕಲ್ ಇನ್ನೂ ಪಕ್ಷದಲ್ಲೇ ಇದ್ದಾರೆ. ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಅವರ ಹೇಳಿಕೆಗಳ ಬಗ್ಗೆ ಪಕ್ಷದ ಹಿರಿಯರು ತೀರ್ಮಾನಕೈಗೊಳ್ಳುತ್ತಾರೆ ಎಂದು ದಕ್ಷಿಣಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪುಲ ತಿಳಿಸಿದ್ದಾರೆ.


ಮಂಗಳೂರಿನಲ್ಲಿ ಮಾತನಾಡಿದ ಅವರು ಸತ್ಯಜಿತ್ ಅವರ ಹೇಳಿಕೆಯಿಂದ ಬಿಜೆಪಿಗೆ ಯಾವುದೇ ಸಮಸ್ಯೆ ಇಲ್ಲ. ಪಕ್ಷ ಸರ್ವಸಮಾಜದ ಬೆಂಬಲ ತೆಗೆದುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ ಎಂದರು. ಸತ್ಯಜಿತ್ ಅವರು ಹಿಂದೂ ಜಾಗರಣ ವೇದಿಕೆ ಮತ್ತು ಆರ್ ಎಸ್ಎಸ್ ಮೂಲಕ ಹಿಂದೂತ್ವದ ಬಗ್ಗೆ ಕೆಲಸ ಮಾಡಿದ್ದಾರೆ. ಆದರೆ ಜಾತಿಯ ಕಾರಣಕ್ಕೆ ಯಾಕೆ ಹೋಗಿದ್ದಾರೆ ಗೊತ್ತಿಲ್ಲ ಎಂದರು.

ಪುತ್ತಿಲ ಪರಿವಾರ ವಿಸರ್ಜನೆ ಆದ ಬಳಿಕ ನಾವೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಚುನಾವಣೆಯ ನಾಮಪತ್ರ ವೇಳೆ ಕೂಡ ಅರುಣ್ ಕುಮಾರ್ ಪುತ್ತಿಲ ಭಾಗವಹಿಸಲಿದ್ದಾರೆ ಎಂದರು. ಎಪ್ರಿಲ್ ನಾಲ್ಕರಂದು ಬ್ರಿಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಲಿದ್ದು, ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಆಗಮಿಸುವ ಸಾದ್ಯತೆ ಇದೆ ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *