Connect with us

    DAKSHINA KANNADA

    ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯಿಸಿ ಸವಣೂರು ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಅಧ್ಯಕ್ಷ ಉಪಾಧ್ಯಕ್ಷರಿಂದ ಪ್ರತಿಭಟನೆ

    ಸವಣೂರು ಸೆಪ್ಟೆಂಬರ್ 19: ಸವಣೂರು ಗ್ರಾ.ಪಂ.ಗೆ ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯಿಸಿ ಕಡಬ ತಾಲೂಕಿನ ಸವಣೂರು ಗ್ರಾ.ಪಂ.ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಗಿದೆ.


    ಈಗ ಇರುವ ಪಿಡಿಓ ವಾರದಲ್ಲಿ ಕೇವಲ 3 ದಿನ ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಖಾಯಂ ಪಿಡಿಓ, ಕಾರ್ಯದರ್ಶಿಯವರನ್ನು ಸೆಪ್ಟೆಂಬರ್ 10ರೊಳಗೆ ನೇಮಕ ಮಾಡಬೇಕು.ಇಲ್ಲದಿದ್ದಲ್ಲಿ ಗ್ರಾ.ಪಂ. ಸದಸ್ಯರೇ ಪ್ರತಿಭಟನೆ ಮಾಡುತ್ತೇವೆ ಅಲ್ಲದೇ ಸಾಮಾನ್ಯ ಸಭೆಯನ್ನೂ ಬಹಿಷ್ಕರಿಸುತ್ತೇವೆ ಎಂದು ಆಗಸ್ಟ್ ತಿಂಗಳ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗಿತ್ತು.

    ಆದರೆ ಸೆಪ್ಟೆಂಬರ್ 18ರ ವರೆಗೆ ನೇಮಕಾತಿಯಾಗದ ಹಿನ್ನೆಲೆಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರು ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್,ಉಪಾಧ್ಯಕ್ಷೆ ಜಯಶ್ರೀ, ಸದಸ್ಯರಾದ ಗಿರಿಶಂಕರ ಸುಲಾಯ, ಚೆನ್ನು ಮುಂಡೋತಡ್ಕ,ಸತೀಶ್ ಅಂಗಡಿಮೂಲೆ, ಎಂ.ಎ.ರಫೀಕ್, ರಾಜೀವಿ ಶೆಟ್ಟಿ, ಭರತ್ ರೈ ,ತಾರಾನಾಥ ಬೊಳಿಯಾಲ, ಶೀನಪ್ಪ ಶೆಟ್ಟಿ ನೆಕ್ರಾಜೆ, ಚಂದ್ರಾವತಿ ಸುಣ್ಣಾಜೆ, ಹರೀಶ್ ಕೆ.,ಚೇತನಾ ಪಾಲ್ತಾಡಿ, ವಿನೋದಾ ರೈ ,ಹರಿಕಲಾ ರೈ ,ಯಶೋಧಾ, ಶಬೀನಾ,ಇಂದಿರಾ ಬೇರಿಕೆ,ತೀರ್ಥರಾಮ ಕೆಡೆಂಜಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

    Share Information
    Advertisement
    Click to comment

    You must be logged in to post a comment Login

    Leave a Reply