LATEST NEWS
ಉಡುಪಿ ನಗರದಲ್ಲಿ ಸಾವರ್ಕರ್ ಪ್ರತಿಮೆ ಮಾಡುವುದು ಅಷ್ಟೊಂದು ಸಮಂಜಸವಲ್ಲ: ಶಾಸಕ ರಘುಪತಿ ಭಟ್
ಉಡುಪಿ, ಆಗಸ್ಟ್ 23: ನಗರದಲ್ಲಿ ಸಾವರ್ಕರ್ ಪ್ರತಿಮೆ ಮಾಡುವುದು ಅಷ್ಟೊಂದು ಸಮಂಜಸವಲ್ಲ. ಮುಂದಿನ ದಿನಗಳಲ್ಲಿ ಸಾವರ್ಕರ್ ಪ್ರತಿಮೆಗೆ ಅವಮಾನವಾದರೆ ಕಷ್ಟವಾಗುತ್ತದೆ.
ಪುತ್ಥಳಿ ಬದಲಿಗೆ ಸಾವರ್ಕರ್ ವೃತ್ತ ನಿರ್ಮಿಸಲು ನಗರಸಭೆಗೆ ಪತ್ರ ಬರೆದಿದ್ದೇನೆ ಎಂದು ಉಡುಪಿ ಶಾಸಕ ಕೆ ರಘುಪತಿ ಭಟ್ ತಿಳಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು ಜನನಿಬಿಡ ಪ್ರದೇಶವಾದ ಹಳೆ ತಾಲೂಕು ಆಫೀಸ್ ಬಳಿಯ ಸರ್ಕಲ್ಗೆ ಸಾವರ್ಕರ್ ಹೆಸರು ಇಡುವಂತೆ ನಗರ ಸಭೆಯ ಅಧಿವೇಶನದಲ್ಲಿ ಠರಾವು ಇಡುತ್ತೇನೆ.
ಈ ಬಗ್ಗೆ ಈಗಾಗಲೇ ನಗರಸಭೆಗೆ ಪತ್ರ ಬರೆದಿದ್ದೇನೆ. ಮೂರ್ತಿ ನಿರ್ಮಿಸುವ ಬಗ್ಗೆ ಚರ್ಚೆ ಮಾಡಬೇಕು. ಖಂಡಿತವಾಗಿ ಉಡುಪಿಯಲ್ಲಿ ವೀರ ಸಾವರ್ಕರ್ ಸರ್ಕಲ್ ನಿರ್ಮಾಣವಾಗುತ್ತದೆ. ವೀರ ಸಾವರ್ಕರ್ ಜೊತೆಗೆ ಅಂಬೇಡ್ಕರ್ ಸರ್ಕಲ್ ಕೂಡ ಮಾಡುತ್ತೇವೆ ಎಂದರು.
ಹಿಜಾಬ್ ಗದ್ದಲದಿಂದ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣ ವಂಚನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಾಸಕರು, ಹಿಜಾಬ್ ಹೋರಾಟವನ್ನು ಪ್ರಾರಂಭ ಮಾಡಿರುವುದು ಸಿಎಫ್ಐಯೇ ಹೊರತು ನಾವಲ್ಲ. ನಮ್ಮ ಕಾಲೇಜಿನಲ್ಲಿ ಹಿಂದಿನಿಂದಲೂ ಯೂನಿಫಾರ್ಮ್ ಕೋಡ್ ಪಾಲನೆ ಆಗುತ್ತಿತ್ತು. ಕಳೆದ 20 ವರ್ಷದಿಂದ ಯೂನಿಫಾರ್ಮ್ ಕೋಡ್ ಇದ್ದ ಬಗ್ಗೆ ದಾಖಲೆ ಕೋರ್ಟಿಗೆ ಸಲ್ಲಿಸಿದ್ದೆವು. ಅದೇ ಕಾರಣಕ್ಕೆ ನಮಗೆ ಹೈಕೋರ್ಟಿನಲ್ಲಿ ಜಯ ಸಿಕ್ಕಿದೆ ಎಂದರು.
You must be logged in to post a comment Login