Connect with us

LATEST NEWS

ಆಧಾರ್ ಜೋಡಣೆಗೆ ಮಾರ್ಚ್ 31 ಅಂತಿಮ ಗಡುವು: ಸುಪ್ರೀಂ ಮಧ್ಯಂತರ ಆದೇಶ

ಆಧಾರ್ ಜೋಡಣೆಗೆ ಮಾರ್ಚ್ 31 ಅಂತಿಮ ಗಡುವು: ಸುಪ್ರೀಂ ಮಧ್ಯಂತರ ಆದೇಶ

ನವದೆಹಲಿ ಡಿಸೆಂಬರ್ 15: ಆಧಾರ್ ಜೋಡಣೆಯ ಗೊಂದಲಗಳಿಗೆ ಸುಪ್ರೀಂಕೋರ್ಟ್ ಅಂತ್ಯ ಹಾಡಿದೆ. ಬ್ಯಾಂಕ್ ಖಾತೆ, ಮೊಬೈಲ್ ಸೇರಿದಂತೆ ಕೇಂದ್ರ ಸರಕಾರದ ವಿವಿಧ ಯೋಜನೆಗಳಿಗೆ ಆಧಾರ್ ಜೊಡಣೆ ಕಡ್ಡಾಯ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿತ್ತು. ನಿರೀಕ್ಷೆಯಂತೆಯೇ ಕೇಂದ್ರ ಸರ್ಕಾರದ ವಾದಕ್ಕೆ ಮನ್ನಣೆ ನೀಡಿರುವ ಸರ್ವೋಚ್ಛ ನ್ಯಾಯಾಲಯ ಆಧಾರ್ ಕಾರ್ಡ್ ಜೋಡಣೆಗೆ ಮಾರ್ಚ್ 31ರ ಅಂತಿಮ ಗಡುವು ನೀಡಿ ತನ್ನ ಮಧ್ಯಂತರ ಆದೇಶ ಹೊರಡಿಸಿದೆ.

ಆಧಾರ ಕಡ್ಡಾಯ ಮಾಡಿದ್ದ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ದಾಖಲಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್ ಇಂದು ತನ್ನ ಮಧ್ಯಂತರ ಆದೇಶ ಹೊರಡಿಸಿದ್ದು, ಆಧಾರ್ ಜೋಡಣೆಗೆ ಮಾರ್ಚ್ 31 ಅಂತಿಮ ಗಡುವು ನೀಡಿ ಆದೇಶ ಹೊರಡಿಸಿದೆ.

ಈ ಬಗ್ಗೆ ಅಂತಿಮ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಕೋರ್ಟ್ ನ ಪಂಚ ಸದಸ್ಯರ ಪೀಠ, ಕೇಂದ್ರ ಸರ್ಕಾರದ ವಾದಕ್ಕೆ ಮನ್ನಣೆ ನೀಡಿದೆ. ಅ ಮೂಲಕ ಇದೇ ಮಾರ್ಚ್ 31ರೊಳಗೆ ಕೇಂದ್ರ ಸರ್ಕಾರದ ಎಲ್ಲ ಸೇವೆಗಳಿಗೆ, ಯೋಜನೆಗಳಿಗೆ, ಮೊಬೈಲ್ ಸೇವೆ ಹಾಗೂ ಬ್ಯಾಂಕಿಂಗ್ ಯೋಜನೆಗಳಿಗೆ ಆಧಾರ್ ಕಾರ್ಡ್ ಜೋಡಣೆ ಮಾಡುವುದು ಕಡ್ಡಾಯ ಮಾಡಲಾಗಿದೆ. ಇದಕ್ಕಾಗಿ 2018ರ ಮಾರ್ಚ್ 31ರವರೆಗೂ ಅಂತಿಮ ಗಡುವು ನೀಡಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *