LATEST NEWS
ಫಾಝಿಲ್ ಹತ್ಯೆ – 4 ಠಾಣಾ ವ್ಯಾಪ್ತಿ ಶಾಲಾ ಕಾಲೇಜುಗಳಿಗೆ ರಜೆ
ಮಂಗಳೂರು ಜುಲೈ 29: ಸುರತ್ಕಲ್ ನಲ್ಲಿ ನಿನ್ನೆ ರಾತ್ರಿ ನಡೆದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಉದ್ವಿಗ್ನವಾಗಿರುವ ಹಿನ್ನಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶುಕ್ರವಾರ (ಜು.29) ಪಣಂಬೂರು, ಮೂಲ್ಕಿ, ಬಜಪೆ, ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಗುರುವಾರ ರಾತ್ರಿ ಮಹಮ್ಮದ್ ಫಾಝಿಲ್ ಎಂಬ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಫಾಝಿಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ನಗರ ಪೊಲೀಸ್ ಕಮಿಷನರ್ ಮನವಿಯ ಮೇರೆಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಅಂತರ್ ಜಿಲ್ಲೆ ಮತ್ತು ಅಂತರ್ ರಾಜ್ಯವನ್ನು ಸಂಪರ್ಕಿಸುವ ಗಡಿಯಲ್ಲಿ ಚೆಕ್ ಪೋಸ್ಟ್ಗಳನ್ನು ಹಾಕಲಾಗುತ್ತದೆ. ಗುರುವಾರ ರಾತ್ರಿ 10 ಗಂಟೆಯಿಂದ ಅನಾವಶ್ಯಕವಾಗಿ ರಸ್ತೆಗೆ ಇಳಿದರೆ ವ್ಯಕ್ತಿಗಳನ್ನು ಬಂಧಿಸಲಾಗುತ್ತದೆ. ವಾಹನವನ್ನು ಜಪ್ತಿ ಮಾಡಲಾಗುವುದು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಜನರು ಈ ಆದೇಶವನ್ನು ಪಾಲಿಸಬೇಕು ಎಂದು ಶಶಿಕುಮಾರ್ ಮನವಿ ಮಾಡಿದ್ದಾರೆ.
You must be logged in to post a comment Login