Connect with us

LATEST NEWS

ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಸವಾರ ಮುಹಮ್ಮದ್ ನೌಫಾಲ್ ಸಾವು…!!

ಉಳ್ಳಾಲ ಫೆಬ್ರವರಿ 23: ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನಪ್ಪಿರುವ ಘಟನೆ ನೇತ್ರಾವತಿ ಸೇತುವೆ ಬಳಿ ನಡೆದಿದೆ.


ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಈ ಅಪಘಾತದಲ್ಲಿ ಅಂಗರಗುಂಡಿಯ ನಿವಾಸಿ ಮುಹಮ್ಮದ್ ನೌಫಾಲ್ (26) ಮೃತಪಟ್ಟಿದ್ದರೆ, ಸಹಸವಾರ ಉಮರ್ ಫಾರೂಕ್ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.
ನೌಫಾಲ್ ಬೈಕಂಪಾಡಿಯ ಎಪಿಎಂಸಿಯಲ್ಲಿ ತರಕಾರಿ ಅಂಗಡಿ ಹೊಂದಿದ್ದರು. ದಿನನಿತ್ಯ ಟೆಂಪೊದಲ್ಲಿ ಕಲ್ಲಾಪಿಗೆ ಬರುವ ನೌಫಾಲ್ ಇಂದು ಮುಂಜಾವ ಸ್ಕೂಟರಲ್ಲಿ ತರಕಾರಿ ಕೊಂಡೊಯ್ಯಲು ಬಂದಿದ್ದರು ಎನ್ನಲಾಗಿದೆ.


ಇಬ್ಬರೂ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ತರಕಾರಿ ವ್ಯಾಪಾರದ ಹಿನ್ನೆಲೆಯಲ್ಲಿ ಪಂಪ್ ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಸಂದರ್ಭ ವೇಳೆ ಈ ಅಪಘಾತ ಸಂಭವಿಸಿದೆ. ಒಂದು ಸ್ಕೂಟರ್ ಢಿಕ್ಕಿ ಹೊಡೆದ ಕೆಲವೇ ನಿಮಿಷಗಳಲ್ಲಿ ಇನ್ನೊಂದು ಸ್ಕೂಟರ್ ಕೂಡ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Click to comment

You must be logged in to post a comment Login

Leave a Reply