Connect with us

    LATEST NEWS

    ಸಂತೆಕಟ್ಟೆ – ಸ್ಕೂಟರ್ ಗೆ ಬಸ್ ಡಿಕ್ಕಿ ತಂದೆ ಮಗಳ ಧಾರುಣ ಸಾವು

    ಉಡುಪಿ ಮಾರ್ಚ್ 02: ಕೇರಳ ಸಾರಿಗೆ ಸಂಸ್ಥೆ ಬಸ್ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸಾವನಪ್ಪಿರುವ ಘಟನೆ ಸಂತೆಕಟ್ಟೆ ಬಳಿ ನಡೆದಿದೆ. ಮೃತರನ್ನು ಗಣೇಶ್ ಪೈ (58) ಹಾಗೂ ಮಗಳು ಗಾಯತ್ರಿ ಪೈ ಎಂದು ಗುರುತಿಸಲಾಗಿದೆ.


    ಹುಬ್ಬಳ್ಳಿಯಿಂದ ಬಸ್ ನಲ್ಲಿ ಆಗಮಿಸಿದ್ದ ಮಗಳನ್ನು ಕರೆದುಕೊಂಡು ಹೋಗಲು ತನ್ನ ಸ್ಕೂಟರ್ ನಲ್ಲಿ ಬಸ್ ನಿಲ್ದಾಣಕ್ಕೆ ತಂದೆ ಬಂದಿದ್ದರು. ಮಗಳ ಜೊತೆ ಸ್ಕೂಟರ್‌ನಲ್ಲಿ ಸಂತೆಕಟ್ಟೆ‌ ಜಂಕ್ಷನ್ ನಲ್ಲಿ ರಸ್ತೆ ದಾಟುತ್ತಿದ್ದಾಗ ಉಡುಪಿಯಿಂದ ಕೊಲ್ಲೂರು ಕಡೆ ತೆರಳುತ್ತಿದ್ದ ಕೇರಳ ರಸ್ತೆ‌ ಸಾರಿಗೆ ಸಂಸ್ಥೆಗೆ ಸೇರಿದ ಎಸಿ‌ ಬಸ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply