Connect with us

DAKSHINA KANNADA

ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸವಾರ ಸಾವು

ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸವಾರ ಸಾವು

ಸುಳ್ಯ ಅಗಸ್ಟ್ 25 : ಎರಡು ದ್ವಿಚಕ್ರ ವಾಹನಗಳ ನಡುವೆ ನಡೆದ ಡಿಕ್ಕಿಯಲ್ಲಿ ಸವಾರನೋರ್ವ ಮೃತಪಟ್ಟಿರುವ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ- ಸವಣೂರು ರಸ್ತೆಯ ಮುಕ್ಕೂರು ಸನಿಹದ ಕಾಯರ್ಮಾರ್ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಸ್ಕೂಟಿ ಸವಾರ ಪೆರುವಾಜೆ ಗ್ರಾಮದ ಅಡ್ಯತಕಂಡ ನಿವಾಸಿ ಪುರುಷೋತ್ತಮ ಗೌಡ ಅಡ್ಯತಕಂಡ (42) ಎಂದು ಗುರುತಿಸಲಾಗಿದೆ.

ಅಗಸ್ಟ್ 24 ರಂದು ರಾತ್ರಿ ಈ ಅಪಘಾತ ಸಂಭವಿಸಿದ್ದು, ಸ್ಕೂಟಿ ಸವಾರ ಪುರುಷೋತ್ತಮ ಗೌಡ ಅವರನ್ನು ತಕ್ಷಣ ಆಸ್ಪತ್ರೆ ಗೆ ಕೊಂಡೊಯ್ಯಲಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.‌ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುರುಷೋತ್ತಮ ಗೌಡ ಅವರು ಮುಕ್ಕೂರು ಪೆರುವಾಜೆ ಶ್ರೀ ಶಾರದೋತ್ಸವ ಸಮಿತಿ ಇದರ ಸ್ಥಾಪಕ ಅಧ್ಯಕ್ಷರಾಗಿಯು ಸೇವೆ ಸಲ್ಲಿಸಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *