UDUPI
ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ,ಜಿಲ್ಲಾ ಸಂಸ್ಥೆಗೆ ರಾಜ್ಯ ಮಟ್ಟದಲ್ಲಿ 2ನೇ ಸ್ಥಾನ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಉಡುಪಿ, ಸೆಪ್ಟೆಂಬರ್ 12: 2017-18 ನೇ ಸಾಲಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯು,ರಾಜ್ಯ ಮಟ್ಟದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕೊಡ ತನ್ನ 99ನೇ ವಾರ್ಷಿಕ ಮಹಾಸಭೆಯಲ್ಲಿ 2016-2017 ನೇ ಸಾಲಿನಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ ಜಿಲ್ಲಾ ಸಂಸ್ಥೆಗಳಿಗೆ ರಾಜ್ಯಮಟ್ಟದ,ವಿಭಾಗ ಮಟ್ಟದ ಪ್ರಶಸ್ತಿಗಳನ್ನು ನೀಡಲಾಯಿತು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಕೇಂದ್ರ ದೊಡ್ಡ ಬಳ್ಳಾಪುರದಲ್ಲಿ ಜರುಗಿದ 99ನೇ ರಾಜ್ಯ ಪರಿóತ್ ವಾರ್ಷಿಕ ಮಹಾಸಭೆಯಲ್ಲಿ ಉಡುಪಿ ಜಿಲ್ಲಾ ಸಂಸ್ಥೆಗೆ ರಾಜ್ಯ ಮಟ್ಟದಲ್ಲಿ ಉತ್ತಮ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಂಡಿರುವ ಜಿಲ್ಲಾ ಸಂಸ್ಥೆ ಎಂದು ಪರಿಗಣಿಸಿ ದ್ವೀತಿಯ ಪ್ರಶಸ್ತಿಯನ್ನು ನೀಡಲಾಗಿದೆ.
ಜಸ್ಟೀಸ್.ಕೆ.ಶಂಕರ್ ನಾರಾಯಣ ರಾವ್ ಪರ್ಯಾಯ ಫಲಕ ವನ್ನು ಪಿ.ಜಿ.ಅರ್. ಸಿಂಧ್ಯ ರಾಜ್ಯ ಮುಖ್ಯ ಆಯುಕ್ತರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಹಾಗೂ ಮಾಜಿ ಸಚಿವರು ಇವರು ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಕೊಂಡಜ್ಜಿ ಷಣ್ಮೂಖಪ್ಪ, ಗೋ.ರು ಚನ್ನಬಸಪ್ಪ,ವಿಧಾನ ಪರಿಷತ್ ಸದಸ್ಯ ಮೋಹನ್ ಕುಮಾರ್ ಕೊಂಡಜ್ಜಿ ಇದ್ದರು. ಜಿಲ್ಲಾ ಪದಾಧಿಕಾರಿಗಳಾದ ಶ್ರೀಮತಿ ಶಾಂತಾ.ವಿ.ಆಚಾರ್ಯ ಜಿಲ್ಲಾ ಮುಖ್ಯ ಆಯುಕ್ತಡಿu ಡಾ| ವಿಜಯೇಂದ್ರ ವಸಂತ್ ಜಿಲ್ಲಾ ಸ್ಕೌಟ್ಸ್ ಆಯುಕ್ತರು, ಅನಂದ್ ಬಿ ಅಡಿಗ ,ಕೊಗ್ಗ ಗಾಣಿಗ, ಪ್ರೋ|ಉದಯ್ ಶೆಟ್ಟಿ ಕೆ, ಪಾರ್ವತಿ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login