Connect with us

    LATEST NEWS

    ಅತ್ಯಾಚಾರ ಸಂತ್ರಸ್ಥೆ ಬಾಲೆಗೆ ಸೂಕ್ತ ಪರಿಹಾರ ಕಲ್ಪಿಸಲು ಎಸ್.ಡಿ.ಪಿ.ಐ ನಿಯೋಗ ಜಿಲ್ಲಾಧಿಕಾರಿ ಭೇಟಿ

    ಅತ್ಯಾಚಾರ ಸಂತ್ರಸ್ಥೆ ಬಾಲೆಗೆ ಸೂಕ್ತ ಪರಿಹಾರ ಕಲ್ಪಿಸಲು ಎಸ್.ಡಿ.ಪಿ.ಐ ನಿಯೋಗ ಜಿಲ್ಲಾಧಿಕಾರಿ ಭೇಟಿ

    ಮಂಗಳೂರು ಸೆಪ್ಟೆಂಬರ್ 22: ಬಂಟ್ವಾಳದ ಗೂಡಿನ ಬಳಿ ನಡೆದ ಅತ್ಯಾಚಾರ ಪ್ರಕರಣದ ಸಂತ್ರಸ್ಥೆ ಬಾಲೆಗೆ ಸೂಕ್ತ ಪರಿಹಾರ ಕಲ್ಪಿಸಲು ಎಸ್ ಡಿಪಿಐ ನಿಯೋಗ ದಕ್ಷಿಣಕನ್ನಡ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

    ಇತ್ತೀಚೆಗೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೂಡಿನಬಳಿ ಎಂಬಲ್ಲಿ 8 ವರ್ಷದ ಬಾಲಕಿಯ ಮೇಲೆ ದುಷ್ಕರ್ಮಿಗಳು ನಡೆಸಿರುವ ಅತ್ಯಾಚಾರ ಪ್ರಕರಣವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ತೀವ್ರವಾಗಿ ಖಂಡಿಸಿದ್ದು, ಮಹಿಳೆಯರು ಸಮಾಜದ ಎಲ್ಲಾ ರಂಗದಲ್ಲಿ ಮುಂದೆ ಬರುತ್ತಿರುವ ಈ ಕಾಲದಲ್ಲಿ, ಅವರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಸಂಖ್ಯೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರವುದು, ಅದರಲ್ಲೂ ಎಳೆ ವಯಸ್ಸಿನ ಹೆಣ್ಣುಮಕ್ಕಳು ಇಂತಹ ದುಷ್ಕರ್ಮಿಗಳ ದಾಳಿಗೆ ತುತ್ತಾಗುತ್ತಿರುವುದು ಬಹಳ ಖೇದಕರವಾಗಿದ್ದು. ಇಂತಹ ಘಟನೆಗಳಿಂದ ನಾಗರಿಕ ಸಮಾಜವು ತಲೆ ತಗ್ಗಿಸುವಂತಾಗಿದೆ.

    ಅತ್ಯಾಚಾರ ಸಂತ್ರಸ್ಥೆಗೆ ಸೂಕ್ತ ಪರಿಹಾರ ಮತ್ತು ಕಾನೂನು ನೆರವನ್ನು ನೀಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರನ್ನ ಎಸ್.ಡಿ.ಪಿಐ ನಿಯೋಗ ಭೆಟಿ ನೀಡಿ ಮನವಿ ಸಲ್ಲಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply