LATEST NEWS
ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ವಿರೋಧಿಸಿ ಎಸ್ ಡಿಪಿಐ ಪ್ರತಿಭಟನೆ

ಮಂಗಳೂರು ಸೆಪ್ಟೆಂಬರ್ 30: ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ 32 ಆರೋಪಿಗಳನ್ನು ಖುಲಾಸೆಗೊಳಿಸಿ ಕ್ಲೀನ್ ಚಿಟ್ ನೀಡಿರುವ ಲಕ್ನೋ ಸಿಬಿಐ ಕೋರ್ಟಿನ ತೀರ್ಮಾನವನ್ನು ಖಂಡಿಸಿ ಎಸ್ ಡಿಪಿಐ ದಕ್ಷಿಣಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬಾಬಿರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಿಬಿಐ ಕೋರ್ಟ್ ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಸೇರಿದಂತೆ 32 ಮಂದಿ ಆರೋಪಿಗಳನ್ನು ನಿರ್ದೋಷಿ ಎಂದು ತೀರ್ಪು ನೀಡಿದ್ದನ್ನು ವಿರೋಧಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಎಸ್ ಡಿಪಿಐ ನಾಯಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ .ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸಿದ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಕಾರ್ಪೋರೇಟರ್ ಮುನೀಬ್ ಬೆಂಗರೆ ಮತ್ತಿತರ ಹಲವು ನಾಯಕರು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.