Connect with us

    LATEST NEWS

    ಸುರತ್ಕಲ್ – ಡಿಸೆಂಬರ್ 29ರವರೆಗೆ ಸೆಕ್ಷನ್ 144 ಮುಂದುವರಿಕೆ…!!

    ಮಂಗಳೂರು ಡಿ 27 : ಸುರತ್ಕಲ್‌ನಲ್ಲಿ ನಡೆದ ದಿನಸಿ ವ್ಯಾಪಾರಿ ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಡಿಸೆಂಬರ್ 29ರವರೆಗೆ ವಿಸ್ತರಿಸಿ ಮಂಗಳೂರು ನಗರ ಪೊಲೀಸರು ಆದೇಶಿಸಿದ್ದಾರೆ.


    ಸುರತ್ಕಲ್, ಕಾವೂರು, ಬಜಪೆ ಮತ್ತು ಪಣಂಬೂರು ಪ್ರದೇಶಗಳಲ್ಲಿ ಡಿಸೆಂಬರ್ 27ರ ಬೆಳಗ್ಗೆ 6 ಗಂಟೆಯಿಂದ ಡಿಸೆಂಬರ್ 29ರ ಬೆಳಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ಜಾರಿಯಲ್ಲಿರಲಿದೆ.


    ಸುರತ್ಕಲ್, ಬಜಪೆ, ಕಾವೂರು ಹಾಗೂ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ, ದಾಸ್ತಾನು, ಸಾಗಾಣಿಕೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಡಿಸೆಂಬರ್ 29ರ ಬೆಳಗ್ಗೆ 10 ಗಂಟೆಯವರೆಗೆ ವಿಸ್ತರಿಸಲಾಗಿದೆ.
    ಡಿಸೆಂಬರ್ 27ರಂದು ಬೆಳಗ್ಗೆ 10 ಗಂಟೆಯಿಂದ ಡಿಸೆಂಬರ್ 29ರ ಬೆಳಗ್ಗೆ 10 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯದ ಅಂಗಡಿಗಳನ್ನು ಕೂಡಾ ಮುಚ್ಚಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಪ್ರದೇಶಗಳಲ್ಲಿ ಪ್ರಕ್ಷುಬ್ದ ವಾತಾವರಣವಿರುವ ಹಿನ್ನೆಲೆಯಲ್ಲಿ ಮದ್ಯಪಾನಿಗಳು ಸಾರ್ವಜನಿಕ ಸೊತ್ತು ನಾಶ, ಹಲ್ಲೆ, ದೊಂಬಿ ನಡೆಸಿ ಸಾರ್ವಜನಿಕ ಶಾಂತಿಗೆ ಭಂಗ ಮತ್ತು ಕಾನೂನು ಸುವ್ಯವಸ್ಥೆಗೆ ತೊಡಕುಂಟು ಮಾಡುವ ಸಾಧತೆ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply