LATEST NEWS
ಕಾರ್ಕಳ – ಗುಂಡು ಹಾರಿಸಿಕೊಂಡು ಗ್ರಾಮಪಂಚಾಯತ್ ಸದಸ್ಯ ಸಾವು
ಕಾರ್ಕಳ ಸೆಪ್ಟೆಂಬರ್ 14: ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಪ್ರಗತಿಪರ ರೈತರೊಬ್ಬರು ಸಾವನಪ್ಪಿರುವ ಘಟನೆ ಕಾರ್ಕಳದ ತೆಳ್ಳಾರಿನಲ್ಲಿ ನಡೆದಿದೆ.
ಮೃತರನ್ನು ದುರ್ಗಾ ಗ್ರಾಮದ ನೀಲೆಬೆಟ್ಟು ಗುತ್ತು ಮನೆ ನಿವಾಸಿ ಭಾಸ್ಕರ ಹೆಗ್ಡೆ (63) ಆತ್ಮಹತ್ಯೆ ಮಾಡಿಕೊಂಡವರು. ಇಂದು ಬೆಳಗ್ಗೆ ಪತ್ನಿ ಅಡುಗೆ ಮನೆಯಲ್ಲಿದ್ದ ವೇಳೆ ಭಾಸ್ಕರ ಹೆಗ್ಡೆ ಮನೆಯಲ್ಲಿದ್ದ ನಾಡಕೋವಿಯಿಂದ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಗುಂಡಿನ ಸದ್ದು ಕೇಳಿ ಪತ್ನಿ ಹೊರಗೋಡಿ ಬಂದಾಗ ಭಾಸ್ಕರ್ ರಕ್ತದ ಮಡುವಿನಲ್ಲಿ ಬಿದ್ದಿದ್ದರೆನ್ನಲಾಗಿದೆ.
ಸಾವಯವ ಕೃಷಿಯ ಮೂಲಕ ಗುರುತಿಸಿಕೊಂಡಿದ್ದ ಭಾಸ್ಕರ ಹೆಗ್ಡೆ ದುರ್ಗಾ ಪಂಚಾಯತ್ ನ ಸದಸ್ಯರು, ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
You must be logged in to post a comment Login