KARNATAKA
ಸೆಲ್ಪಿ ಹುಚ್ಚಿಗೆ ಕಾಳಿನದಿಯಲ್ಲಿ ನೀರುಪಾಲಾದ ಯುವಕ ಯುವತಿ
ಕಾರವಾರ: ಸೆಲ್ಫಿ ಹುಚ್ಚಿಗೆ ಯುವಕ ಯುವತಿಯರಿಬ್ಬರು ಕಾಳಿ ನದಿ ಸೇತುವೆ ಮೇಲಿಂದ ಬಿದ್ದು ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಗಣೇಶಗುಡಿಯಲ್ಲಿ ನಡೆದಿದೆ.
ಗಣೇಶಗುಡಿಯ ಸಮೀಪವಿರುವ ಸೂಪ ಅಣೆಕಟ್ಟಿನಲ್ಲಿ ಈ ಘಟನೆ ನಡೆದಿದ್ದು ಪ್ರತ್ಯಕ್ಷದರ್ಶಿಗಳ ಪ್ರಕಾರ, ಅವರು ಸೇತುವೆಯ ದಂಡೆಯ ಮೇಲೆ ಕುಳಿತು ಸೆಲ್ಫಿ ತೆಗೆದುಕೊಳ್ಳುತ್ತಿದ್ದರು, ಯುವತಿಯ ಕೈಯಲ್ಲಿದ್ದ ಮೊಬೈಲ್ ಫೋನ್ ಜಾರಿಬಿದ್ದಾಗ. ಅದನ್ನು ಹಿಡಿಯುವ ಪ್ರಯತ್ನದಲ್ಲಿ ಅವಳು ನೀರಿಗೆ ಬಿದ್ದಿದ್ದಾಳೆ.
ಯುವತಿಯನ್ನು ಬೀದರ್ನ ರಕ್ಷಿತಾ ಎಂದು ಗುರುತಿಸಲಾಗಿದೆ. ಯುವಕನ ಮಾಹಿತಿ ತಿಳಿದು ಬರಬೇಕಿದೆ. ರಾಮನಗರ ಠಾಣೆ ಪಿ.ಎಸ್.ಐ ಕಿರಣ ಪಾಟೀಲ ಹಾಗೂ ಜೊಯಿಡಾದ ಅಗ್ನಿಶಾಮಕ ಸಿಬ್ಬಂದಿ, ವೈಟ್ ವಾಟರ್ ರ್ಯಾಫ್ಟಿಂಗ್ ತಂಡದ ಸದಸ್ಯರು ಸ್ಥಳದಲ್ಲಿದ್ದು, ಇಬ್ಬರಿಗೂ ಶೋಧ ಕಾರ್ಯ ನಡೆಸುತ್ತಿದ್ದಾರೆ. ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, ಈ ಇಬ್ಬರೂ ದಾಂಡೇಲಿಯಿಂದ ರಿಕ್ಷಾದಲ್ಲಿ ಬಂದಿದ್ದರು. ಕತ್ತಲಾಗಿದ್ದರಿಂದ ಶೋಧಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದ್ದು, ಇಂದು ಸಹ ಕಾರ್ಯಾಚರಣೆ ಮುಂದುವರಿಯಲಿದೆ.
You must be logged in to post a comment Login