Connect with us

LATEST NEWS

ದಕ ಜಿಲ್ಲಾ ಕಾಂಗ್ರೆಸ್‌ ಕಛೇರಿಯಲ್ಲಿ ಹೊಡೆದಾಡಿಕೊಂಡ ಹಿರಿಯ ಕಾಂಗ್ರೆಸ್‌ ಮುಖಂಡರು

ಮಂಗಳೂರು: ಮಂಗಳೂರಿನ ಮಲ್ಲಿಕಟ್ಟೆ ಬಳಿ ಇರುವ ಕಾಂಗ್ರೆಸ್​ ಪಕ್ಷದ ಕಚೇರಿಯಲ್ಲಿ ಮುಖಂಡರು ಹೊಡೆದಾಡಿಕೊಂಡಿದ್ದಾರೆ. ಪಂಚಾಯಿತಿ ಉಪಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ನಂತರ ಹೊಡೆದಾಟಕ್ಕೆ ತಿರುಗಿದೆ.

ಮೊದಲಿಗೆ ಕಾಂಗ್ರೆಸ್ ಮುಖಂಡ ಪ್ರಕಾಶ್ ಶೆಟ್ಟಿ ತುಂಬೆಗೆ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್​ಕುಮಾರ್ ಹೊಡೆದಿದ್ದಾರೆ. ಇದೇ ವೇಳೆ, ತಿರುಗಿಸಿ ಹರೀಶ್​ಗೆ ಹೊಡೆಯಲು ಪ್ರಕಾಶ್ ಶೆಟ್ಟಿ ಮುಂದಾಗಿದ್ದಾರೆ. ಘಟನೆ ಬೆನ್ನಲ್ಲೇ ಕಾಂಗ್ರೆಸ್ ಕಚೇರಿಗೆ ಪೊಲೀಸರು ಆಗಮಿಸಿದ್ದಾರೆ. ಸಂಟ್ರಲ್ ಎಸಿಪಿ ಮತ್ತು ಕದ್ರಿ ಪೊಲೀಸರು ಆಗಮಿಸಿದ್ದಾರೆ. ಸದ್ಯ ಕಾಂಗ್ರೆಸ್ ಕಚೇರಿ ಬಳಿ ಕಾರ್ಯಕರ್ತರು ಜಮಾಯಿಸಿದ್ದಾರೆ.

ಕಾಂಗ್ರೆಸ್ ನಾಯಕರ ಮಧ್ಯೆ ಸಂಧಾನ ನಡೆಯಿತಾದರೂ ನಂತರವೂ ಕಚೇರಿ ಬಳಿ ಕಾರ್ಯಕರ್ತರು ಜಮಾಯಿಸಿದರು.  ಉಭಯ ನಾಯಕರ ತಂಡದ ಕಾರ್ಯಕರ್ತರು ಜಮಾಯಿಸಿದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಲಾಗಿದೆ. ಒಂದು ಕೆಎಸ್​ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *