FILM
ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ..ಜೀವ ರಕ್ಷಕದ ನೆರವಿನಿಂದ ಚಿಕಿತ್ಸೆ
ಬೆಂಗಳೂರು ಡಿಸೆಂಬರ್ 2: ಕನ್ನಡದ ಹಿರಿಯ ನಟ ಶಿವರಾಂ ಅವರ ಆರೋಗ್ಯ ಸ್ಥಿತಿ ಏರುಪೇರಾದ ಹಿನ್ನಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಬೆಂಗಳೂರಿನ ಸೀತಾ ಸರ್ಕಲ್ ಸಮೀಪದ ಪ್ರಶಾಂತ್ ಆಸ್ಪತ್ರೆಯಲ್ಲಿ ಶಿವರಾಂ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಮಿದುಳಿಗೆ ಹಾನಿಯಾಗಿರುವುದಾಗಿ ವೈದ್ಯರು ತಿಳಿಸಿದ್ದು, ಜೀವ ರಕ್ಷಕದ ನೆರವಿನಿಂದ ಚಿಕಿತ್ಸೆ ನೀಡಲಾಗುತ್ತಿದೆ.
ಶಿವರಾಂ ಅವರಿಗೆ ಇತ್ತೀಚೆಗೆ ಕೆ.ಆರ್. ರಸ್ತೆಯ ಬಳಿ ಕಾರು ಅಪಘಾತ ಸಂಭವಿಸಿತ್ತು.
ಈ ನಡುವೆ ಮನೆಯಲ್ಲಿ ಅಯ್ಯಪ್ಪನ ಪೂಜೆ ಮಾಡಲು ರೂಂಗೆ ಹೋಗಿದ್ದ ಅವರು ರೂಮ್ನಲ್ಲಿ ಬಿದ್ದ ಹಿನ್ನೆಲೆ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಮನೆಯ ಸದಸ್ಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ತಂದೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಅವರ ಮಗ ಪ್ರಶಾಂತ್ ಸ್ಕ್ಯಾನಿಂಗ್ ರಿಪೋರ್ಟ್ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದು ಗೊತ್ತಾಗಿದೆ. ವೈದ್ಯರು ಸರ್ಜರಿ ಮಾಡಬೇಕು ಎಂದು ಹೇಳಿದ್ರು. ಆದರೆ ನಮ್ಮ ತಂದೆಗೆ ವಯಸ್ಸಾದ ಹಿನ್ನೆಲೆ ಸರ್ಜರಿ ಮಾಡಲು ಆಗಿಲ್ಲ. ಸದ್ಯ ಐಸಿಯುನಲ್ಲೇ ಅವರಿಗೆ ಚಿಕಿತ್ಸೆ ಮುಂದುವರೆದಿದೆ” ಎಂದು ಹೇಳಿದ್ದಾರೆ. ಬೆಂಗಳೂರಿನ ಹೊಸಕೆರೆಹಳ್ಳಿ ಕ್ರಾಸ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಶಿವರಾಂ ದಾಖಲು ಆಗಿದ್ದಾರೆ.
You must be logged in to post a comment Login