Connect with us

    KARNATAKA

    ಮದುವೆಯಾದ ಒಂದೇ ದಿನಕ್ಕೆ ಬೇರೆ ಬೇರೆಯಾದ ಜೋಡಿ…!

    ಮೈಸೂರು, ಮಾರ್ಚ್ 31: ಪ್ರೀತಿಸಿ ಮದುವೆಯಾದ ಜೋಡಿ ಇನ್ನೇನು ಹೊಸ ಜೀವನ ಆರಂಭಿಸಿ ಸುಖ ಸಂಸಾರದ ಕನಸು ಕಂಡಿದ್ದರು. ಆದ್ರೆ ಯುವತಿಯ ಪೋಷಕರು ಯುವಕನ ಮೇಲೆ ಹಲ್ಲೆ ಮಾಡಿ ಆಕೆಯನ್ನು ಒತ್ತಾಯಪೂರ್ವಕವಾಗಿ ಕರೆದೊಯ್ದು ಯುವ ಜೋಡಿಯನ್ನು ಆರಂಭದಲ್ಲೇ ಬೇರೆ ಮಾಡಿರುವ ಪ್ರಕರಣ ಜಿಲ್ಲೆಯ ಹುಣಸೂರಿನಲ್ಲಿ ಬೆಳಕಿಗೆ ಬಂದಿದೆ.

    ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕದಬಹಳ್ಳಿ ಗ್ರಾಮದ ಅಭಿಷೇಕ್ ಮತ್ತು ಚೋಳೇನಹಳ್ಳಿ ಗ್ರಾಮದ ಅನನ್ಯ ಪರಸ್ಪರ ಪ್ರೀತಿಸುತ್ತಿದ್ದರು. ಮಾರ್ಚ್​ 28ರಂದು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶ್ರೀ ಬಾಲ ತ್ರಿಪುರ ಸುಂದರಿ ಅಮ್ಮನವರ ದೇವಸ್ಥಾನದಲ್ಲಿ ಇಬ್ಬರು ಮದುವೆಯಾಗಿದ್ದರು. ಇದಾದ ಒಂದೇ ದಿನಕ್ಕೆ ಇಬ್ಬರಿಗೂ ಆಘಾತ ಕಾದಿತ್ತು. ಯುವತಿಯನ್ನು ಆಕೆಯ ಪೋಷಕರು ಮನೆಗೆ ಕರೆದೊಯ್ದಿದ್ದಾರೆ ಎಂದು ನವವಿವಾಹಿತ ಅಭಿಷೇಕ್​ ಆರೋಪಿದ್ದಾರೆ.

    ಮಾ. 29 ರಂದು ಊರಿಗೆ ಮರಳುತ್ತಿದ್ದಾಗ ಹುಣಸೂರಿನ ಕೆಫೆ ಕಾಫಿ ಡೇ ಬಳಿ ಅನನ್ಯಳ ಸಂಬಂಧಿಗಳು ಬಂದು ಅಭಿಷೇಕ್​ಗೆ ಹೊಡೆದಿದ್ದರಂತೆ. ನಂತರ ಅನನ್ಯಳನ್ನು ಕರೆದುಕೊಂಡು ಹೋಗಿದ್ದಾರೆ. ನೊಂದ ಅಭಿಷೇಕ್​ ಹುಣಸೂರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ, ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲವೆಂದು ಅಭಿಷೇಕ್ ಅಸಮಾಧಾನ ಹೊರಹಾಕಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply