DAKSHINA KANNADA
ಮೈಸೂರು ಬಿಎಸ್ಸಿ ವಿಧ್ಯಾರ್ಥಿನಿಲಯ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಬಂಧನ
ಮೈಸೂರು ಬಿಎಸ್ಸಿ ವಿಧ್ಯಾರ್ಥಿನಿಲಯ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಬಂಧನ
ಪುತ್ತೂರು ಅಗಸ್ಟ್ 10: ಮೈಸೂರಿನ ಕೆ ಆರ್ ಆಸ್ಪತ್ರೆಯ ಬಿಎಸ್ಸಿ ಶುಶ್ರುಕಿಯರ ವಿಧ್ಯಾರ್ಥಿ ನಿಲಯಕ್ಕೆ ನುಗ್ಗಿ ವಿಧ್ಯಾರ್ಥಿನಿಗೆ ಬಲಾತ್ಕಾರವಾಗಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ಬಂಟ್ವಾಳದ ಅಜಿಲಮೊಗೇರು ನಿವಾಸಿ ಮಹಮ್ಮದ್ ಅಲ್ತಾಫ್ ಎಂದು ಗುರುತಿಸಲಾಗಿದ್ದು, ಈತ ಬೆಳ್ತಂಗಡಿ ಯ ಪಟ್ರಮೆ ಗ್ರಾಮದಲ್ಲಿ ತೋಟವೊಂದರಲ್ಲಿ ಕೂಲಿ ಕೆಲಸಗಾರನಾಗಿ ತಲೆಮರೆಸಿಕೊಂಡಿದ್ದ ಎಂದು ಹೇಳಲಾಗಿದೆ.
ಕಳೆದ ಜುಲೈ ತಿಂಗಳ 20 ರಂದು ಆರೋಪಿ ಮೈಸೂರು ನಗರದ ದೇವರಾಜ ಪೊಲೀಸ್ ಠಾಣಾ ಸರಹದ್ದಿನ ಕೆ ಆರ್ ಆಸ್ಪತ್ರೆಯ ಆವರಣದ ಬಿಎಸ್ಸಿ ಶೂಶ್ರಕಿಯರ ವಿದ್ಯಾರ್ಥಿ ನಿಲಯಕ್ಕೆ ರಾತ್ರಿ ಅಕ್ರಮ ಪ್ರವೇಶ ಮಾಡಿ ಸೆಕ್ಯೂರಿಟಿ ಗಾರ್ಡ ಗೆ ಚಾಕು ತೋರಿಸಿ ಬೆದರಿಸಿ ಒಳಗೆ ಮಲಗಿದ್ದ ವಿದ್ಯಾರ್ಥಿನಿಗೆ ಬಲಾತ್ಕಾರವಾಗಿ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ.
ಈ ಸಂದರ್ಭದಲ್ಲಿ ವಿಧ್ಯಾರ್ಥಿನಿಯ ಬೊಬ್ಬೆ ಕೇಳಿ ವಿದ್ಯಾರ್ಥಿ ನಿಲಯದ ಇತರರು ಎಚ್ಚರವಾದಾಗ ಆರೋಪಿ ಓಡಿ ಹೋಗಿ ತಪ್ಪಿಸಿಕೊಂಡಿದ್ದ, ಈ ಪ್ರಕರಣ ಕುರಿತಂತೆ ಮೈಸೂರು ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ನಡುವೆ ಪ್ರಕರಣ ಬೆನ್ನತ್ತಿದ ಉಪ್ಪಿನಂಗಡಿ ಪೊಲೀಸರಿಗೆ ಆರೋಪಿ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದಲ್ಲಿ ತೋಟವೊಂದರಲ್ಲಿ ಕೂಲಿ ಕೆಲಸ ಮಾಡಿಕೊಂಡು ತಲೆಮರೆಸಿಕೊಂಡಿದ್ದ ಎಂಬ ಮಾಹಿತಿ ದೊರೆತಿತ್ತು, ಖಚಿತ ಮಾಹಿತಿ ಬೆನ್ನಟ್ಟಿದ ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸ್ಐ ನಂದಕುಮಾರ್ ಎಂ ಎಂ, ಮತ್ತು ಅವರ ತಂಡವು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. ಮೈಸೂರಿನಲ್ಲಿ ಪ್ರಕರಣ ದಾಖಲಾಗಿರುವುದರಿಂದ ಆರೋಪಿಯನ್ನು ಮೈಸೂರು ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
You must be logged in to post a comment Login