DAKSHINA KANNADA
ಪಾಠ ಹೇಳಿಕೊಡುವ ನೆಪದಲ್ಲಿ ಶಿಕ್ಷಕನಿಂದ ವಿಧ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ..!!
ಸುಳ್ಯ ಅಗಸ್ಟ್ 08: ಪಾಠ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಬೆದರಿಕೆ ಒಡ್ಡಿದ್ದ ಆರೋಪದಡಿ ಇಲ್ಲಿನ ಸುಬ್ರಹ್ಮಣ್ಯ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ಶಿಕ್ಷಕನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ರಾಯಚೂರಿನ ಗುರುರಾಜ್ ಬಂಧಿತ ಆರೋಪಿ. ಈತ ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ವಿದ್ಯಾರ್ಥಿನಿಯನ್ನು ತನ್ನ ಮನೆಗೆ ಕರೆಸಿಕೊಳ್ಳುತ್ತಿದ್ದ. ಬಾಲಕಿಯನ್ನು ಪುಸಲಾಯಿಸಿ ವಿವಸ್ತೃಗೊಳಿಸಿ ಮೊಬೈಲ್ ಮೂಲಕ ಫೋಟೋ ತೆಗೆಯುತ್ತಿದ್ದ. ಅದನ್ನು ತೋರಿಸಿ ಮನೆಯಿಂದ ಹಣ ತರುವಂತೆ ಬೆದರಿಕೆ ಹಾಕುತ್ತಿದ್ದ. ಆತನಿಗೆ ಪತ್ನಿಯೂ ಸಾಥ್ ನೀಡುತ್ತಿದ್ದಳು ಎಂದು ವಿದ್ಯಾರ್ಥಿನಿಯ ತಾಯಿ ಠಾಣೆಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಆತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
You must be logged in to post a comment Login