Connect with us

    LATEST NEWS

    ಅಪ್ರಾಪ್ತ ಬುದ್ದಿಮಾಂಧ್ಯ ಬಾಲಕಿಯರಿಗೆ ಲೈಂಗಿಕ ಕಿರುಕುಳ ಪ್ರಮುಖ ಆರೋಪಿ ಸೆರೆ

    ಅಪ್ರಾಪ್ತ ಬುದ್ದಿಮಾಂಧ್ಯ ಬಾಲಕಿಯರಿಗೆ ಲೈಂಗಿಕ ಕಿರುಕುಳ ಪ್ರಮುಖ ಆರೋಪಿ ಸೆರೆ

    ಮಂಗಳೂರು ಜುಲೈ 18: ಮೈಸೂರು ಹಾಗೂ ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮೈಸೂರಿನ ಅಪ್ರಾಪ್ತ ಬುದ್ದಿಮಾಂಧ್ಯ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಅಬಾನ್(30) ಎಂದು ಗುರುತಿಸಲಾಗಿದೆ. ಬಾಲಕಿಯರ ಅಪಹರಣದ ಕುರಿತು ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದ ಮೈಸೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಾಲಕಿಯರನ್ನು ಪತ್ತೆ ಹಚ್ಚಿದ ಬಳಿಕ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿ ಕೊಂಡಿರುವ ಇನ್ನುಳಿದ ನಾಲ್ವರು ಆರೋಪಿಗಳಿಗಾಗಿ ಪೊಲೀಸರಿಂದ ಶೋಧ ಮುಂದುವರೆಸಿದ್ದಾರೆ.

    ಆರೋಪಿ ಯುವಕರೆಲ್ಲ ಮೈಸೂರು, ಮಂಗಳೂರು ಹಾಗು ಭಟ್ಕಳ ಮೂಲದವರಾಗಿದ್ದಾರೆ. ಬಾಲಕಿಯರನ್ನು ವೇಶ್ಯಾವಾಟಿಕೆ ಅಡ್ಡೆಗೆ ದೂಡಲು ಯತ್ನಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯರ ಅಪಹರಣದ ಕುರಿತು ಪೋಷಕರು ಮೈಸೂರಿನ ಒಡನಾಡಿ ಸಂಸ್ಥೆಗೆ ನೀಡಿದ ದೂರಿನ ಹಿನ್ನಲೆಯಲ್ಲಿ ಮೈಸೂರಿನ ಉದಯಗಿರಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply