BELTHANGADI
ಧರ್ಮಸ್ಥಳ : ಅಪ್ರಾಪ್ತೆ ಬಾಲಕಿಗೆ ಲೈಂಗಿಕ ದೌರ್ಜನ್ಯ ಇಬ್ಬರು ಆರೋಪಿಗಳ ಬಂಧನ
ಪುತ್ತೂರು ಸೆಪ್ಟೆಂಬರ್ 11: ಪರಿಶಿಷ್ಟ ಪಂಗಡದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬೆಳ್ತಂಗಡಿಯ ಕಳಂಜ ನಿವಾಸಿ ರೆಜಿಮೋನು ಮತ್ತು ಕೃಷ್ಣ ಎಂದು ಗುರುತಿಸಲಾಗಿದೆ. ದೌರ್ಜನ್ಯಕ್ಕೊಳಗಾದ ಅಪ್ರಾಪ್ತೆ ಬಾಲಕಿ ಆರೋಪಿ ರೆಜಿಮೋನು ತೋಟದಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದು, ಆರೋಪಿ ಕುಡಿದು ಬಂದು ಬಾಲಕಿಗೆ ಕೈಯಿಂದ ಹೊಡೆಯುತ್ತಿದ್ದನು ಅಲ್ಲದೆ ಎದೆಯ ಭಾಗ ಹಾಗೂ ಮುಟ್ಟಬಾರದ ಸ್ಥಳವನ್ನು ಮುಟ್ಟುತ್ತಿದ್ದನು ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಲ್ಲದೆ ರೆಜಿಮೊನು ಮನೆಯಲ್ಲಿ ಕೆಲಸಕ್ಕಿದ್ದ ಕೃಷ್ಣ ಎಂಬಾತನು ಬಾಲಕಿಯನ್ನು ಸಾಯಿಸುತ್ತೇನೆ ಎಂದು ಬೆದರಿಕೆ ಕೂಡ ಹಾಕಿದ್ದನು ಎಂದು ಆರೋಪಿಸಲಾಗಿದೆ.
ಬಾಲಕಿ ಈ ವಿಚಾರವನ್ನು ತನ್ನ ಸಂಬಂಧಿಕರಲ್ಲಿ ತಿಳಿಸಿದ್ದಾಳೆ. ಈ ಹಿನ್ನಲೆ ಘಟನೆ ಕುರಿತಂತೆ ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ದ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
You must be logged in to post a comment Login