LATEST NEWS
ಮೂಡಬಿದಿರೆ – ನಿರ್ಜನ ಪ್ರದೇಶದಲ್ಲಿ ಬಾಲಕಿಯನ್ನ ಅಡ್ಡಗಟ್ಟಿ ಮಾನಭಂಗಕ್ಕೆ ಯತ್ನ – ಆರೋಪಿ ಅರೆಸ್ಟ್

ಮೂಡುಬಿದಿರೆ ಮಾರ್ಚ್ 12: ಸಂಜೆ ಟ್ಯೂಷನ್ ಮುಗಿಸಿ ಸೈಕಲ್ ನಲ್ಲಿ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ನಿರ್ಜನ ಪ್ರದೇಶದಲ್ಲಿ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯಾ ನಿವಾಸಿ ಪವನ್ ಕುಮಾರ್ ಬಂಧಿತ ಆರೋಪಿ. ಮಾರ್ಚ್ 8ರಂದು ಸಂಜೆ ಟ್ಯೂಷನ್ ಮುಗಿಸಿ ಸೈಕಲ್ನಲ್ಲಿ ಮನೆಗೆ ಮರಳುತ್ತಿದ್ದ ಬಾಲಕಿಯನ್ನು ಆರೋಪಿ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಹೋಗಿದ್ದಾನೆ. ನಿರ್ಜನ ಪ್ರದೇಶದಲ್ಲಿ ಆಕೆಯನ್ನು ಅಡ್ಡಗಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಬಾಲಕಿ ಆತನಿಂದ ತಪ್ಪಿಸಿಕೊಂಡು ಸೈಕಲ್ ಅಲ್ಲೇ ಬಿಟ್ಟು, ಮನೆಗೆ ಓಡಿ ಹೋಗಿ ಪೋಷಕರಿಗೆ ವಿಷಯ ತಿಳಿಸಿದ್ದಾಳೆ ಎನ್ನಲಾಗಿದೆ. ಘಟನೆಯ ಬಳಿಕ ಆರೋಪಿಯು ಅಲ್ಲಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಬಾಲಕಿಯ ಮನೆಯವರು ದೂರು ನೀಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.
