DAKSHINA KANNADA
ಈ ಬಾರಿ ಅಭ್ಯರ್ಥಿ ಸ್ಥಾನ ನನಗೇ ನೀಡುವುದಾಗಿ ಶಕುಂತಲಾ ಶೆಟ್ಟಿ ಮಹಾಲಿಂಗೇಶ್ವರ ದೇವರ ಮುಂದೆ ಪ್ರಮಾಣ ಮಾಡಿದ್ದಾರೆ: ಕಾವು ಹೇಮನಾಥ ಶೆಟ್ಟಿ
ಪುತ್ತೂರು, ನವೆಂಬರ್ 16: ವಿಧಾನಸಭಾ ಚುನಾವಣೆ ಘೋಷಣೆ ಮೊದಲೇ ಪುತ್ತೂರಿನಲ್ಲಿ ಅಭ್ಯರ್ಥಿತನಕ್ಕಾಗಿ ಪೈಪೋಟಿ ಆರಂಭವಾಗಿದೆ.
ಕಾಂಗ್ರೇಸ್ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು 10 ಮಿಕ್ಕಿದ ಅರ್ಜಿಗಳು ಸಲ್ಲಿಕೆಯಾಗಿದೆ. ಕಾವು ಹೇಮನಾಥ ಶೆಟ್ಟಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ದಿವ್ಯಪ್ರಭಾ ಗೌಡ, ಎಂ.ಬಿ.ವಿಶ್ವನಾಥ ರೈ, ಭರತ್ ಮುಂಡೋಡಿ, ಸತೀಶ್ ಕೆಡಿಂಜೆ ಮೊದಲಾದವರಿಂದ 2 ಲಕ್ಷ ನೀಡಿ ಅಭ್ಯರ್ಥಿತನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಮಾಜಿ ಶಾಸಕಿ ಶಕುಂತಲಾ ಶೆಟ್ಟಿಗಾಗಿ ನಾನು ಹಲವು ಬಾರಿ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದಾರೆ. ಈ ಬಾರಿ ಪಕ್ಷದ ಆಂತರಿಕ ಸಮಿಕ್ಷೆಯಲ್ಲಿ ನನ್ನ ಹೆಸರೇ ಮುಂದಿದೆ, ಈ ಬಾರಿ ಪಕ್ಷ ನನ್ನನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪರಿಗಣಿಸಲಿದೆ, ಕಳೆದ ಚುನಾವಣೆಯಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿಯವರಿಗೆ ಅಭ್ಯರ್ಥಿ ಸ್ಥಾನ ಬಿಟ್ಟುಕೊಟ್ಟಿದ್ದೇನೆ.
ಅಂದು ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿ ಸ್ಥಾನ ನಿನಗೇ ಎಂದು ಶಕುಂತಲಾ ಶೆಟ್ಟಿ ಹೇಳಿದ್ದಾರೆ. ಮಹಾಲಿಂಗೇಶ್ವರ ದೇವರಲ್ಲಿ ಪ್ರಮಾಣ ಮಾಡಿ ಈ ವಿಚಾರ ಹೇಳಿದ್ದಾರೆ. ಇದರಿಂದಾಗಿ ಈ ಬಾರಿ ಅವರು ನನಗೆ ವಿರೋಧ ಮಾಡಲು ಸಾಧ್ಯವಿಲ್ಲ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿ ಕಾವು ಹೇಮನಾಥ ಶೆಟ್ಟಿ ಹೇಳಿದ್ದಾರೆ.
You must be logged in to post a comment Login