Connect with us

KARNATAKA

ಹಿಂದೂ ಮುಖಂಡ ಶರಣ್ ಪಂಪ್ವೆಲ್ ಗೆ ಚಿಕ್ಕಮಗಳೂರು ಪ್ರವೇಶಕ್ಕೆ ನಿರ್ಬಂಧ

ಚಿಕ್ಕಮಗಳೂರು ಜುಲೈ 06: ಹಿಂದೂ ಮುಖಂಡ ಶರಣ್ ಪಂಪ್ವೆಲ್ ಗೆ ಒಂದು ತಿಂಗಳ ಕಾಲ ಚಿಕ್ಕಮಗಳೂರು ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜುಲೈ 6ರಿಂದ ಆಗಸ್ಟ್ 4ರವರೆಗೆ 30 ದಿನಗಳ ಕಾಲ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಶರಣ್ ಪಂಪ್‌ವೆಲ್ ಮೇಲೆ 22ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯ ಕೆಲ ಸಂಘಟನೆಗಳ ಮುಖಂಡರು ಚಿಕ್ಕಮಗಳೂರು, ಮೂಡಿಗೆರೆ, ಆಲ್ದೂರಿನಲ್ಲಿ ಶರಣ್ ಪಂಪ್‍ವೆಲ್ ಅವರನ್ನು ಕರೆಸಿ ಭಾಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಿದ್ದರು. ಶರಣ್ ಪಂಪ್‍ವೆಲ್ ಕೋಮುಧ್ವೇಷ ಹರಡುವಂತಹ ಭಾಷಣ ಮಾಡುವ ಪ್ರವೃತ್ತಿ ಹೊಂದಿದ್ದು, ಈತನ ಪ್ರಚೋದನಾಕಾರಿ ಭಾಷಣದಿಂದ ಗಲಾಟೆ, ಗುಂಪು ಘರ್ಷಣೆ ಉಂಟಾಗುವ ಸಾಧ್ಯತೆಗಳಿವೆ ಎನ್ನುವ ಪೊಲೀಸ್ ವರದಿ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಸಣ್ಣ ಘಟನೆಯೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆಗಳಿವೆ ಎನ್ನುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ.

Share Information
Continue Reading
Advertisement
1 Comment

1 Comment

    Leave a Reply

    Your email address will not be published. Required fields are marked *