LATEST NEWS
ರಕ್ಷಣೆಗಾಗಿ ತಲವಾರು, ಕತ್ತಿಗಳನ್ನ ಹಿಡಿಯಿರಿ ಎಂದ ಶರಣ್ ಪಂಪ್ ವೆಲ್ ಮೇಲೆ ಕೇಸ್….!!
ಉಡುಪಿ ಅಗಸ್ಟ್ 04 : ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ವಿಶ್ವಹಿಂದೂ ಪರಿಷತ್ ಬಜರಂಗದಳ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದ ಶರಣ್ ಪಂಪ್ ವೆಲ್ ಸೇರಿದಂತೆ ಮೂವರ ಮೇಲೆ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಹಾಗೂ ಬಜರಂಗದಳ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉಡುಪಿ ಕಾಲೇಜಿನಲ್ಲಿ ನಡೆದ ವೀಡಿಯೋ ವಿವಾದದ ವಿರುದ್ಧ ಕೃಷ್ಣಮಠ ಸಮೀಪದ ಪಾಕಿರ್ಂಗ್ ಏರಿಯಾದಲ್ಲಿ ಗುರುವಾರ ವಿಹೆಚ್ಪಿ ಪ್ರತಿಭಟನಾ ಸಭೆ ನಡೆಸಿತ್ತು. ಈ ವೇಳೆ ಮಾತನಾಡಿದ್ದ ಈ ಇಬ್ಬರು ಮುಖಂಡರು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಸೌಟು ಪೊರಕೆ ಹಿಡಿಯುವ ಕೈಗಳು ನ್ಯಾಯಕ್ಕಾಗಿ, ಮನೆಯ ಮಕ್ಕಳ ರಕ್ಷಣೆಗಾಗಿ ತಲವಾರು, ಕತ್ತಿಗಳನ್ನ ಹಿಡಿಯಿರಿ ಎಂದು ಶರಣ್ ಪಂಪ್ ವೆಲ್ ಕರೆ ನೀಡಿದ್ದರು. ಅಲಲ್ದೆ ವೀಣಾ ಶೆಟ್ಟಿ ಪ್ರತಿಭಟನೆ ಸಭೆಯಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ, ಮದರಸಗಳಿಗೆ ಸೇರಿಸಿ ಎನ್ನುವ ಮೂಲಕ ಪ್ರಚೋದನಕಾರಿ ಮಾತಾಡಿದ್ದ ಹಿನ್ನಲೆ ಎಫ್ಐಆರ್ ದಾಖಲಾಗಿದೆ. ಜೊತೆಗೆ ವೀಣಾ ಶೆಟ್ಟಿ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಸುಮೋಟೋ ಕೇಸ್ ಕೂಡ ಹಾಕಲಾಗಿದೆ.
You must be logged in to post a comment Login