Connect with us

LATEST NEWS

ಅಕ್ರಮ ಗೋಸಾಗಾಟಗರಿಂದ ಗೋರಕ್ಷಕರ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನ – ಆರೋಪಿಗಳ ವಿರುದ್ಧ ಗೂಂಡಾ ಕಾಯಿದೆ ದಾಖಲಿಸಿ – ಶರಣ್ ಪಂಪ್ ವೆಲ್

ಮಂಗಳೂರು ಮಾರ್ಚ್ 28: ಮಂಗಳೂರು ಸೂರಲ್ಪಾಡಿ ಮಸೀದಿ ಬಳಿ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಹತ್ಯೆ ಮಾಡಲು ಅಕ್ರಮ ಸಾಗಾಟ ನಡೆಸುತ್ತಿರುವ ಸಂಧರ್ಭ, ಅದನ್ನು ತಡೆಯುವಾಗ ಗೋರಕ್ಷಕರ ಜೊತೆಯಿದ್ದ ಚಂದನ್ ಭಟ್ ರವರ ವಾಹನದ ಮೇಲೆ ಗುಂಡು ಹಾರಿಸಿ ಕೊಲೆಗೆ ಪ್ರಯತ್ನ ಮಾಡಿರುವ ಕೃತ್ಯ ನಡೆದಿದೆ.


ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಚಂದನ್ ಭಟ್ ರವರು ಬಜ್ಪೆ ಪೊಲೀಸರಿಗೆ ದೂರು ನೀಡಿದ್ದಾರೆ. ಜಿಲ್ಲೆಯಲ್ಲಿ ನಿರಂತರವಾಗಿ ಅಕ್ರಮ ಗೋಸಾಗಾಟ, ಅಕ್ರಮ ಗೋಮಾಂಸ ಮಾರಾಟವು ಮಿತಿ ಮೀರುತ್ತಿದ್ದು ಕಳೆದ 10 ದಿನಗಳಲ್ಲಿ 6 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿವೆ. ಇದೀಗ ಗೋಸಾಗಾಟಗಾರರು ಅಕ್ರಮ ಗೋಸಾಗಾಟ ಮಾಡುವುದರೊಂದಿಗೆ ಅಕ್ರಮ ಪಿಸ್ತೂಲುಗಳನ್ನು ಬಳಸಿ ಗೋರಕ್ಷಕರ ಕೊಲೆಗೆ ಪ್ರಯತ್ನಿಸುತ್ತಿರುವುದು ಬಹಳ ಆತಂಕಕಾರಿಯಾಗಿದೆ. ಇದೊಂದು ಭಯೋದ್ಪಾದಕ ಕೃತ್ಯವಾಗಿದ್ದು, ಈ ಕೂಡಲೇ ನೈಜ ಆರೋಪಿಗಳನ್ನು ಬಂಧಿಸಿ, ಅವರ ಮೇಲೆ ಅಕ್ರಮ ಗೋಸಾಗಾಟ, ಗೋಕಳ್ಳತನ, ಗೋಹತ್ಯೆ ಕೇಸು, ARMS Act ಧಾಖಲಿಸುವುದರೊಂದಿಗೆ, ಗೂಂಡಾ ಕಾಯಿದೆ ಅಡಿ ಬಂಧಿಸಿ ಕ್ರಮಕೈಗೊಳ್ಳಲು ಆಗ್ರಹಿಸುತ್ತೇವೆ. ಎಂದು ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಪ್ರಕಟಣೆಯಲ್ಲಿ ತಿಳಿಸಿದರು

Share Information
Continue Reading
Advertisement
Click to comment

Leave a Reply

Your email address will not be published. Required fields are marked *