Connect with us

    KARNATAKA

    ಶಿವಮೊಗ್ಗ – ಹಿಜಬ್ ಇಲ್ಲದೆ ಪರೀಕ್ಷೆ ಬರೆಯಲ್ಲ ಎಂದ ವಿಧ್ಯಾರ್ಥಿನಿಯರು

    ಶಿವಮೊಗ್ಗ ಫೆಬ್ರವರಿ 14: ಹಿಜಬ್ ವಿವಾದ ಇನ್ನೂ ಮುಂದುವರೆದಿದ್ದು. ಶಿವಮೊಗ್ಗದಲ್ಲಿ ಹಿಜಬ್ ಇಲ್ಲದೆ ನಾವು ಪರೀಕ್ಷೆಯನ್ನು ಬರೆಯುದಿಲ್ಲ ಎಂದು ಕೆಲ ವಿಧ್ಯಾರ್ಥಿನಿಯರು ತರಗತಿಯಿಂದ ಹೊರ ನಡೆದ ಘಟನೆ ನಡೆದಿದೆ.


    ಶಿವಮೊಗ್ಗದ ಬಿ.ಎಚ್.ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಇಂದು 10ನೇ ತರಗತಿಗೆ ತಾಲೂಕು ಮಟ್ಟದ ಪೂರ್ವಭಾವಿ ಸಿದ್ಧತಾ ಪರೀಕ್ಷೆ ಸಹ ಇತ್ತು. ತರಗತಿಗೆ ಹಾಜರಾಗಿದ್ದ ವಿದ್ಯಾರ್ಥಿನಿಯರಿಗೆ ಶಿಕ್ಷಕರು ಹಿಜಬ್, ಬುರ್ಖಾ ತೆಗೆಯುವಂತೆ ಸೂಚಿಸಿದ್ದರು.


    ಕೆಲ ವಿದ್ಯಾರ್ಥಿನಿಯರು ಬುರ್ಖಾ, ಹಿಜಬ್ ತೆಗೆದಿಟ್ಟು ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಪರೀಕ್ಷೆ ಆರಂಭಕ್ಕೂ ಮೊದಲು ಕೆಲವು ವಿದ್ಯಾರ್ಥಿನಿಯರು ನಾವು ಹಿಜಬ್ ಧರಿಸಿಯೇ ಪರೀಕ್ಷೆ ಬರೆಯುತ್ತೇವೆ. ಇಲ್ಲದಿದ್ದರೆ ಪರೀಕ್ಷೆ ಬರೆಯುವುದಿಲ್ಲ ಎಂದು ತಗಾದೆ ತೆಗೆದಿದ್ದಾರೆ.


    ಇದಕ್ಕೆ ಒಪ್ಪದ ಶಿಕ್ಷಕರು ಎಲ್ಲರೂ ಕರ್ನಾಟಕ ಹೈಕೋರ್ಟ್ ಆದೇಶ ಪಾಲನೆ ಮಾಡಬೇಕು. ಹಿಜಬ್ ತೆಗೆದರೆ ತರಗತಿಯಲ್ಲಿ ಇರಿ, ಇಲ್ಲದಿದ್ದರೆ ಹೊರಗೆ ಹೋಗಿ ಎಂದಿದ್ದಾರೆ. ವಿದ್ಯಾರ್ಥಿನಿಯರು ಮರು ಮಾತನಾಡದೇ ನಾವು ಬೇಕಾದರೆ ಪರೀಕ್ಷೆ ಬಹಿಷ್ಕರಿಸುತ್ತೇವೆ. ಹಿಜಬ್ ತೆಗೆಯುವುದಿಲ್ಲ ಎಂದು ಶಾಲೆಯಿಂದ ಮನೆಗೆ ತೆರಳಿದ್ದಾರೆ. ಕೆಲವು ಪೋಷಕರು ಸಹ ಶಾಲೆಗೆ ಆಗಮಿಸಿ ತಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply