Connect with us

KARNATAKA

ಶಿವಮೊಗ್ಗ: ಚಿರತೆ ದಾಳಿಗೆ ಮಹಿಳೆ ಬಲಿ…!

ಶಿವಮೊಗ್ಗ, ಆಗಸ್ಟ್ 11: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವರು ಮೇಲೆ ಚಿರತೆ ದಾಳಿ ನಡೆಸಿ ಮಹಿಳೆ ಸಾವನ್ನಪ್ಪಿದ್ದ ಘಟನೆ ಶಿವಮೊಗ್ಗ ತಾಲೂಕಿನ ಬಿಕ್ಕೋನ ಹಳ್ಳಿಯಲ್ಲಿ ನಡೆದಿದೆ.

ಯಶೋದಮ್ಮ (45) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಯಶೋದಮ್ಮ ಮಹಿಳೆಯು ಹೊಲದಲ್ಲಿ ಕಳೆ ತೆಗೆಯುವಾಗ ಚಿರತೆಯೊಂದು ದಾಳಿ ನಡೆಸಿದ ಪರಿಣಾಮ ಮಹಿಳೆಯು  ಬಲಿಯಾಗಿದ್ದಾರೆ.

ಈ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಚಿರತೆ ದಾಳಿಗೆ ಮಹಿಳೆಯ ಕುತ್ತಿಗೆ ಭಾಗವೂ ಗಾಯಗೊಂಡಿದ್ದು, ಹಿಂಭಾಗದಲ್ಲಿ ತೀವ್ರ ತರವಾದ ದಾಳಿಗೆ ಒಳಗಾಗಿದೆ ಎನ್ನಲಾಗಿದೆ.

ಇದರಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಮತ್ತು ಶಂಕರವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *