Connect with us

KARNATAKA

ಶಿವಮೊಗ್ಗ – ನವವಿವಾಹಿತೆ ನೇಣಿಗೆ ಶರಣು

ಶಿವಮೊಗ್ಗ ಜನವರಿ 18: ನವವಿವಾಹಿತೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶರ್ಮಿತಾ ಬಿ.ಯು. (24) ಎಂದು ತಿಳಿದುಬಂದಿದೆ. ಬಿಜ್ಜಳ ಗ್ರಾಮದ ಶರ್ಮಿತಾ ಎಂಬ ಯುವತಿ 2023ರ ಮಾರ್ಚ್ ತಿಂಗಳಿನಲ್ಲಿ ದಾಸನಕೊಡಿಗೆ ಗ್ರಾಮದ ವಿದ್ಯಾರ್ಥ್ ಎಂಬ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದರು.


ಪತಿ ವಿದ್ಯಾರ್ಥ್ ಸೋಮೇಶ್ವರ ವನ್ಯಜೀವಿ ಅಭಯಾರಣ್ಯದಲ್ಲಿ ರಾತ್ರಿ ಪಾಳಿಯ ಕೆಲಕ್ಕೆ ಪತಿ ತೆರಳಿದ್ದ ಸಂದರ್ಭದಲ್ಲಿ ಶರ್ಮಿತಾ ನೇಣಿಗೆ ಶರಣಾಗಿದ್ದಾರೆಂದು ಹೇಳಲಾಗುತ್ತಿದೆ. ಪತಿಯ ಮನೆಯಲ್ಲಿ ಅತ್ತೆ, ಮಾವ ಇದ್ದರು. ಎಂದಿನಂತೆ ಮನೆಯ ಉಪ್ಪರಿಗೆ ಕೊಠಡಿಗೆ ರಾತ್ರಿ ಮಲಗಲು ಶರ್ಮಿತಾ ತೆರಳಿದ್ದಾರೆ. ಆದರೆ ಬೆಳಿಗ್ಗೆ ಬಾಗಿಲು ತೆರೆದಿರಲಿಲ್ಲ. ಹೀಗಾಗಿ ಅನುಮಾನದಿಂದ ಮನೆಯ ಕೆಲಸದವರು ಕಿಟಕಿಯಿಂದ ನೋಡಿದಾಗ ಶರ್ಮಿತಾ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ಶರ್ಮಿತಾ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ಕಂಡು ತಕ್ಷಣ ಯುವತಿಯ ಪಾಲಕರಿಗೆ ವಿಷಯ ತಿಳಿಸಿದ್ದಾರೆ.

ಶರ್ಮಿತಾ ಪಾಲಕರು ಬಂದ ನಂತರ ಕೊಠಡಿಯ ಬಾಗಿಲು ಮುರಿದು ಒಳ ಪ್ರವೇಶಿಸಿದ್ದಾರೆ. ಮೃತದೇಹದ ಬಳಿ ಮರಣಪತ್ರ ಲಭ್ಯವಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆಯಲಾಗಿದೆ ಎನ್ನಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *