KARNATAKA
ಶಿವಮೊಗ್ಗ – ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಮೂವರ ಸಾವು..70ಕ್ಕೂ ಅಧಿಕ ಜನರಿಗೆ ಗಂಭೀರ ಗಾಯ..!!
ಶಿವಮೊಗ್ಗ ಮೇ 11: ಎರಡು ಖಾಸಗಿ ಬಸ್ ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದ ಬಳಿ ನಡೆದಿದ್ದು, ಸಾವಿನ ಸಂಖ್ಯೆ ಅಧಿಕವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಶ್ರೀನಿವಾಸ ಮತ್ತು ಲಕ್ಷ್ಮಿ ಹೆಸರಿನ ಖಾಸಗಿ ಬಸ್ಸುಗಳ ಮುಖಾಮುಖಿ ಡಿಕ್ಕಿಯಾಗಿದೆ. ಮೂವರು ಪ್ರಯಾಣಿಕರು ಸಾವನಪ್ಪಿದ ಸಾಧ್ಯತೆಯಿದೆ. 70ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚೋರಡಿ ಸಮೀಪದ ಕುಮದ್ವತಿ ನದಿಯ ಸೇತುವೆ ಮೇಲೆ ನಡೆದ ಅಪಘಾತ ಸಂಭವಿಸಿದ್ದು, ಅಪಘಾತವಾದ ರಭಸಕ್ಕೆ ಇಡೀ ಬಸ್ಗಳ ಅರ್ಧ ಭಾಗವೇ ಸಂಪೂರ್ಣ ನಜ್ಜುಗುಜ್ಜಾಗಿವೆ. ಕುಂಸಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.
You must be logged in to post a comment Login