Connect with us

KARNATAKA

ಶಿವಮೊಗ್ಗ ಕಾರು ಶೋರೂಂಗೆ  ಬೆಂಕಿ – ಕಾರು ಭಸ್ಮ ಕೋಟ್ಯಾಂತರ ರೂಪಾಯಿ ನಷ್ಟ..!

ಶಿವಮೊಗ್ಗ: ಶಿವಮೊಗ್ಗದ ಶಂಕರಮಠದಲ್ಲಿರುವ ಹುಂಡೈ ಕಾರು ಶೋ ರೂಂನಲ್ಲಿ ಆಕಸ್ಮಿಕ ಬೆಂಕಿ ಅವಘಡ ನಡೆದಿದ್ದು ಕೋಟ್ಯಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ.

 

ಕಾರು ಶೋ ರೂಂ ಸಂಪೂರ್ಣ ವಾಲ್ ಸೀಲಿಂಗ್​ನಿಂದ ಮಾಡಿದ್ದಾಗಿದ್ದರಿಂದ ಬೆಂಕಿ ಕೆನ್ನಾಲಿಗೆಗೆ ಶೋರೂಂನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಶೋ ರೂಂನಲ್ಲಿ ಡಿಸ್‌ ಪ್ಲೇ ಇಟ್ಟಿದ್ದ 6 ಕಾರುಗಳಲ್ಲಿ 3 ಕಾರುಗಳು ಸಂಪೂರ್ಣ ಸುಟ್ಟು ಹೋಗಿವೆ. ಸರ್ವೀಸ್​ಗೆ ಎಂದು ಇಟ್ಟಿದ್ದ ಕಾರುಗಳು ಹಾಗೂ ಪಕ್ಕದ ಟಾಟಾ ಶೋ ರೂಂನ ಹೊರಭಾಗದಲ್ಲಿದ್ದ ನಾಲ್ಕರಿಂದ – ಐದು ಕಾರುಗಳು ಸಹ ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಭಾಗಶಃ ಹಾನಿಯಾಗಿವೆ. ಅಲ್ಲದೇ ನೆಲ ಮಾಳಿಗೆಯಲ್ಲಿ ಇಟ್ಟಿದ್ದ ಕಾರಿನ ಬಿಡಿ ಭಾಗಗಳು ಸುಟ್ಟು ಭಸ್ಮವಾಗಿವೆ. ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ: ಶೋ ರೂಂಗೆ ಹೇಗೆ ಬೆಂಕಿ ಬಿತ್ತು ಎನ್ನುವುದು ಇನ್ನೂ ತಿಳಿದು ಬಂದಿಲ್ಲ.

ಅಗ್ನಿಶಾಮಕದಳದ ನಾಲ್ಕು ವಾಹನಗಳು ಬೆಂಕಿ ನಂದಿಸುವ ಕಾರ್ಯ ನಡೆಸಿವೆ. ಶೋ ರೂಂನಲ್ಲಿ ಎಷ್ಟು ಕಾರುಗಳು ಹಾಗೂ ಇತರ ನಷ್ಟ ಉಂಟಾಗಿವೆ ಎಂಬುದು ನಿಖರವಾಗಿ ತಿಳಿದು ಬಂದಿಲ್ಲ. ಕಾರು ಶೋ ರೂಂ ಮಾಲೀಕ ರಾಹುಲ್ ಅವರು ವಿದೇಶಿ ಪ್ರವಾಸದಲ್ಲಿದ್ದಾರೆ. ಸ್ಥಳಕ್ಕೆ ಶಿವಮೊಗ್ಗ ನಗರ ಡಿವೈಎಸ್ಪಿ ಸೇರಿದಂತೆ ಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶೋ ರೂಂನವರು ನಿಗದಿತ ಪ್ರಮಾಣದಲ್ಲಿ ಆಟೋಮ್ಯಾಟಿಕ್​ ಆಗಿ ನೀರು ಆನ್​ ಆಗುವ ಸೌಲಭ್ಯ ಮಾಡಿಕೊಂಡಿಲ್ಲ. ಶೋ ರೂಂನಲ್ಲಿ ಕೇವಲ ಫೈರ್​ ಸಿಲಿಂಡರ್​ ವ್ಯವಸ್ಥೆ ಮಾತ್ರ ಇತ್ತು. ಕಾರು ಶೋ ರೂಂನಲ್ಲಿ ಫೈರ್​ ಸೇಫ್ಟಿ ಮಾಡದೇ ಇರುವುದು ಇಷ್ಟೊಂದು ನಷ್ಟಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.ಬೆಂಕಿ ಬಿದ್ದ ಸುದ್ದಿ ತಿಳಿಯುತ್ತಲೇ ಜನರು ತಂಡೋಪ ತಂಡವಾಗಿ ಆಗಮಿಸಿದ್ದು, ಶಂಕರ ಮಠ ರಸ್ತೆಯಲ್ಲಿ ಜನ ಸಾಗರವೇ ಸೇರಿತ್ತು. ಜನರನ್ನು ಚದುರಿಸಲು ಹರ ಸಾಹಸ ಪಡುವಂತಾಗಿತ್ತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *