KARNATAKA
ಶಿವಮೊಗ್ಗ – ಮನೆಯೊಳಗೆ ಬೆಂಕಿ ತಗುಲಿ ಮೂವರ ಸಜೀವ ದಹನ
ಶಿವಮೊಗ್ಗ ಅಕ್ಟೋಬರ್ 08: ಮನೆಯೊಳಗೆ ಆಕಸ್ಮಿಕ ಬೆಂಕಿ ತಗುಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೆಕೋಡ್ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಅರ್ಚಕ ವೃತ್ತಿ ಮಾಡುತ್ತಿದ್ದ ರಾಘವೇಂದ್ರ ಕೊಕೋಡ್ (65), ಪತ್ನಿ ನಾಗರತ್ನ (55), ಹಿರಿಯ ಪುತ್ರ ಶ್ರೀರಾಮ್ (30) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ಪುತ್ರ ಭರತ್ (28) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಮನೆಯ ಕೋಣೆಯ ಒಳಗೆ ಕಟ್ಟಿಗೆಯನ್ನು ಕೂಡಿಸಿ ಬೆಂಕಿ ಹಚ್ಚಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಆತ್ಮಹತ್ಯೆಯ ಶಂಕೆ ಎದುರಾಗಿದೆ.
You must be logged in to post a comment Login