LATEST NEWS
ಉಡುಪಿ ಅಷ್ಟಮಠದ ಶಿರೂರು ಮಠಾಧೀಶ ಶಿರೂರು ಶ್ರೀಗಳು ವಿಧಿವಶ
ಉಡುಪಿ ಅಷ್ಟಮಠದ ಶಿರೂರು ಮಠಾಧೀಶ ಶಿರೂರು ಶ್ರೀಗಳು ವಿಧಿವಶ
ಉಡುಪಿ ಜುಲೈ 19: ಉಡುಪಿಯ ಅಷ್ಟಮಠದ ಸ್ವಾಮಿಜಿಗಳಲ್ಲಿ ಒಬ್ಬರಾಗಿದ್ದ ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮಿಜಿಗಳು ಇಂದು ಉಡುಪಿಯ ಮಣಿಪಾಲದಲ್ಲಿ ಕೆಎಂಸಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಉಡುಪಿಯ ಅಷ್ಟಮಠದಲ್ಲಿ ವಿಭಿನ್ನ ವ್ಯಕ್ತಿತ್ವದ ಸ್ವಾಮಿಜಿಯೆಂದೇ ಪ್ರಸಿದ್ದವಾಗಿರುವ ಶಿರೂರು ಮಠದ ಲಕ್ಷ್ಮೀವರ ಶ್ರೀಗಳು ಆಹಾರ ವ್ಯತ್ಯಯದ ಹಿನ್ನಲೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಶಿರೂರು ಮೂಲ ಮಠದಲ್ಲಿ ನಿನ್ನೆ ನಡೆದ ಕಾರ್ಯಕ್ರಮದ ಬಳಿಕ ಸ್ವಾಮಿಜಿಗೆ ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡಿತ್ತು ಎಂದು ಹೇಳಲಾಗಿತ್ತು, ಅಲ್ಲದೆ ರಕ್ತದ ವಾಂತಿ ಕೂಡ ಮಾಡಿಕೊಂಡಿದ್ದರು ಎಂದು ಹೇಳಲಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಕೆಎಂಸಿ ಆಸ್ಪತ್ರೆಗ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ ಎಂದು ಕೆಎಂಸಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಘೋಷಿಸಿದ್ದಾರೆ.
ಕಳೆದ ಕೆಲ ತಿಂಗಳುಗಳಿಂದ ಶ್ರೀಗಳಿಗೆ ಆಗಾಗ ಆರೋಗ್ಯ ಸಮಸ್ಯೆ ಎದುರಾಗುತ್ತಲೇ ಇತ್ತು. ಈ ಹಿಂದೆ ಥೈರಾಯ್ಡ್ ಸಮಸ್ಯೆ ಇದ್ದಿದ್ದರಿಂದ ಶಿರೂರು ಶ್ರೀಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ನಂತರದ ದಿನಗಳಲ್ಲಿ ಪದೇ ಪದೇ ಆಸ್ಪತ್ರೆಗಳಿಗೆ ಚೆಕಪ್ ಗೆ ತೆರಳುತ್ತಿದ್ದ ಶ್ರೀಗಳು ಒಮ್ಮೆ ಗುಣಮುಖರಾದ್ರೆ ಮತ್ತೊಮ್ಮೆ ಅನಾರೋಗ್ಯಕ್ಕೆ ಈಡಾಗುತ್ತಲೇ ಇದ್ದರು.
ಚುನಾವಣೆ ಸಂದರ್ಭ ನಿರ್ಜಲೀಕರದಿಂದ ಅಸ್ವಸ್ಥರಾಗಿದ್ದರು. ನಿನ್ನೆ ಬೆಳಗ್ಗೆ ಶ್ರೀಗಳನ್ನು ಕೆಎಂಸಿಗೆ ದಾಖಲಿಸಲಾಗಿತ್ತು. ಅವರು ರಕ್ತವಾಂತಿ ಮಾಡಿದ್ದರಿಂದ ಸಂಜೆಯಿಂದಲೇ ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದೀಗ ಆಸ್ಪತ್ರೆಯಲ್ಲೇ ವಿಧಿವಶರಾಗಿದ್ದಾರೆ.
You must be logged in to post a comment Login