Connect with us

LATEST NEWS

ಶಿರೂರು ಟೋಲ್ ಗೇಟ್ ಗೆ ಅಂಬ್ಯುಲೆನ್ಸ್ ಡಿಕ್ಕಿ – ಮೂವರ ಸಾವು

ಉಡುಪಿ ಜುಲೈ 20: ರೋಗಿಗಳನ್ನು ಕಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಶಿರೂರು ಟೋಲ್ ಗೇಟ್ ಗೆ ಗುದ್ದಿದ ಪರಿಣಾಮ ನಾಲ್ವರು ಸಾವನಪ್ಪಿ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತರನ್ನು ಚಿಕಿತ್ಸೆ ಪಡೆಯಲು ಬರುತ್ತಿದ್ದ ಹೃದ್ರೋಗಿ ಗಜಾನನ ನಾಯ್ಕ, ಸಂಬಂಧಿಗಳಾದ ಮಂಜುನಾಥ ನಾಯ್ಕ, ಲೋಕೇಶ್ ನಾಯ್ಕ, ಜ್ಯೋತಿ ನಾಯ್ಕ ಎಂದು ಗುರುತಿಸಲಾಗಿದೆ.


ಹೊನ್ನಾವರದಿಂದ ಕುಂದಾಪುರ ಆಸ್ಪತ್ರೆಗೆ ರೋಗಿಯನ್ನು ಕರೆತರುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಶಿರೂರಿನ ಟೋಲ್ ಗೇಟ್‌‌ನ ಕಂಬಕ್ಕೆ ಢಿಕ್ಕಿ ಹೊಡೆದ ಬಳಿಕ ಪಲ್ಟಿಯಾಗಿದ್ದು, ಅದರಲ್ಲಿದ್ದ ಮೂವರು ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.


ಇನ್ನು ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆಂಬುಲೆನ್ಸ್‌ ಒಳಗಿದ್ದ ಗಣೇಶ್ ನಾಯ್ಕ, ಗೀತಾ ಗಜಾನನ ನಾಯ್ಕ, ಶಶಾಂಕ್ ನಾಯ್ಕ, ಆಂಬುಲೆನ್ಸ್ ಚಾಲಕ ರೋಷನ್‌ ಹಾಗೂ ಟೋಲ್ ಸಿಬ್ಬಂದಿ ಶಂಭಾಜಿ ಘೋರ್ಪಡೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಂಬುಲೆನ್ಸ್ ಸಾಗುತ್ತಿದ್ದ ಮಾರ್ಗದಲ್ಲಿ ಅಡ್ಡಲಾಗಿದ್ದ ಬ್ಯಾರಿಕೇಡ್‌ಗಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ವಾಹನ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿರುವ ಸಾದ್ಯತೆಗಳು ಹೆಚ್ಚಾಗಿವೆ ಎನ್ನಲಾಗಿದೆ. ಟೋಲ್‌ ಕೇಂದ್ರದ ಬಳಿ ವಾಹನಗಳ ವೇಗವನ್ನು ತಗ್ಗಿಸಲು ದೊಡ್ಡ ಹಂಪ್ ನಿರ್ಮಿಸಲಾಗಿರುತ್ತದೆ. ವೇಗವಾಗಿ ಆಂಬುಲೆನ್ಸ್ ಚಲಾಯಿಸಿಕೊಂಡು ಬಂದ ಚಾಲಕ ಹಂಪ್‌ ಬಂದಾಗ ಬ್ರೇಕ್ ಹಾಕಿದ್ದು ವಾಹನ ನಿಯಂತ್ರಣ ತಪ್ಪಿ ಅಪಘಾತಕ್ಕೆ ಕಾರಣವಾಗಿರಬಹುದು. ಮತ್ತೊಂದೆಡೆ ಸುರಿಯುತ್ತಿದ್ದ ಜಿಟಿ ಜಿಟಿ ಮಳೆಯೂ ಪ್ರತಿಕೂಲವಾಗಿತ್ತು ಎನ್ನಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *