Connect with us

    LATEST NEWS

    ಶಿರ್ವ ಅಕ್ರಮ ಮರಳುಗಾರಿಕೆ ಅಡ್ಡೆಗೆ ಕಾಪು ತಹಶೀಲ್ದಾರ್ ದಾಳಿ…ದಾಳಿ ಮಾಹಿತಿ ಅರಿತ ಮರಳು ದಂಧೆಕೋರರು ವಾಹನಗಳ‌ ಸಹಿತ ಪರಾರಿ

    ಉಡುಪಿ ಜುಲೈ 9: ಶಿರ್ವ ಸಮೀಪದ ಮುಟ್ಲುಪಾಡಿ ಸೇತುವೆ ಕೆಳಗೆ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಕಾಪು ತಹಶೀಲ್ದಾರ್ ಪ್ರತಿಭಾ ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭ ಮೊದಲೇ ಮಾಹಿತಿ ಪಡೆದಿದ್ದ ಮರಳು ದಂಧೆಕೋರರು ವಾಹನಗಳ‌ ಸಹಿತ ಪರಾರಿಯಾಗಿದ್ದಾರೆ.


    ಶಿರ್ವ ಬಳಿಯ ಮುಟ್ಲುಪಾಡಿ ಬಳಿಯ ಪಾಪನಾಶಿನಿ ಹೊಳೆಯಲ್ಲಿ ಡ್ರಜ್ಜಿಂಗ್ ಮಿಶಿನ್ ಹಾಕಿ ಅಕ್ರಮ ವಾಗಿ ಮರಳುಗಾರಿಕೆ‌ ನಡೆಸಲಾಗುತ್ತಿತ್ತು. ಈ ಕುರಿತಂತೆ ಸ್ಥಳೀಯರು ಶಿರ್ವ ಪೊಲೀಸರಿಗೆ ಹಾಗೂ ಗಣಿ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ.ಈ ಬಗ್ಗೆ ಸಾಮಾಜಿಕ ಕಾರ್ಯಕರ್ತರ ಮೂಲಕ ಕಾಪು ತಹಶೀಲ್ದಾರ್ ಗೆ ಮಾಹಿತಿ ನೀಡಿದ್ದು ವಿಷಯ ತಿಳಿದ ತಹಶೀಲ್ದಾರ್ ಪ್ರತಿಭಾ ಅಕ್ರಮ ಅಡ್ಡೆಗೆ ದಾಳಿ ನಡೆಸಿದರು.


    ಶಿರ್ವ ಬಳಿಯ ಮುಟ್ಲಪಾಡಿಯ ಬಳಿ ಅಕ್ರಮ ಮರಳುಗಾರಿಕೆಗೆ ತಹಶೀಲ್ದಾರ್ ದಾಳಿ ನಡೆಸುವ ಮಾಹಿತಿ ಸೋರಿಕೆ ಆದ ಹಿನ್ನಲೆಯಲ್ಲಿ ದಂಧೆಕೋರರು ಸ್ಥಳದಲ್ಲಿದ್ದ ಸುಮಾರು ಇಪ್ಪತ್ತಕ್ಕೂ ಹೆಚ್ಚು ಲಾರಿಗಳನ್ನು ಸ್ಥಳದಿಂದ ಸ್ಥಳಾಂತರ ಮಾಡಿದ್ದರು. ಹೊಳೆಯಲ್ಲಿದ್ದ ಡ್ರಜ್ಜಿಂಗ್ ಮೆಶಿನ್ ಇದ್ದ ದೋಣಿಯನ್ನು ತೆರವುಗೊಳಿಸಲಾಗಿತ್ತು.

    ಅದ್ರೆ ಪೈಪುಗಳನ್ನ ಅಲ್ಲೇ ಹೊಳೆಯಲ್ಲೇ ಬಿಟ್ಟು ಪರಾರಿಯಾಗಿದ್ದರು.ಮತ್ತೊಂದು ಭಾಗದಲ್ಲಿ ಜೆಸಿಬಿಯನ್ನು ಲಾರಿ ಮೂಲಕ ಸಾಗಿಸಲು ಪ್ರಯತ್ನ ಪಡುವಷ್ಟರಲ್ಲಿ ತಹಶೀಲ್ದಾರ್ ದಾಳಿ ನಡೆಸಿಯಾಗಿತ್ತು. ಹೀಗಾಗಿ ಜೆಸಿಬಿ ಸಹಿತ ಲಾರಿಯನ್ನು ತಶೀಲ್ದಾರ್ ವಶಪಡಿಸಿಕೊಂಡರು.


    ಕಾಪು ಭಾಗದಲ್ಲಿ ಹಲವೆಡೆ ಅಕ್ರಮ‌ ಮರಳುಗಾರಿಕೆ ನಡೆಯುತ್ತಿದ್ದು,ಪೊಲೀಸ್ ಇಲಾಖೆ ಹಾಗೂ ಗಣಿ ಇಲಾಖೆ ಇದಕ್ಕೆ ಬೆಂಬಲ ನೀಡುತ್ತಿದ್ದಾರೆ ಎನ್ನಲಾಗಿದೆ.ಈ ಬಗ್ಗೆ ಜಿಲ್ಲಾಡಳಿತ ಕಠಿನ ಕ್ರಮ ಕೈಗೊಳ್ಳುವುದರ ಮೂಲಕ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಬೇಕು ಎನ್ನುವ ಕೂಗು ಕೇಳಿ ಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply