Connect with us

FILM

ಶ್ರೀಕೃಷ್ಣ ಜನ್ಮಾಷ್ಠಮಿ ಸಂಭ್ರಮದಲ್ಲಿ ಶಿವರಾಜ್ ಕುಮಾರ್

ಉಡುಪಿ ಸೆಪ್ಟೆಂಬರ್ 13: ಉಡುಪಿ ಶ್ರೀಕೃಷ್ಣ ಮಠಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಚ್ಚರಿ ಭೇಟಿ ನೀಡಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಪಾಲ್ಗೊಂಡರು. ಉಡುಪಿಯಲ್ಲಿ ಶ್ರೀಕೃಷ್ಣನ ಜನ್ಮಾಷ್ಠಮಿ , ವಿಟ್ಲಪಿಂಡಿ ಸಂಭ್ರಮ ಮನೆಮಾಡಿದ್ದು , ಉಡುಪಿಯಲ್ಲಿ ಸಿನೆಮಾ ಚಿತ್ರೀಕರಣದಲ್ಲಿರುವ ಹ್ಯಾಟ್ರೀಕ್ ಹೀರೋ ಶಿವರಾಜ್ ಕುಮಾರ್ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಸಂಭ್ರಮದಲ್ಲಿ ಪಾಲ್ಗೊಂಡರು.

ಶ್ರೀಕೃಷ್ಣನ ದರ್ಶನ ಪಡೆದು ಪೂಜೆ ಸಲ್ಲಿಸಿದ ಶಿವಣ್ಣ ತದನಂತರ ಪೇಜಾವರ ಶ್ರೀಗಳ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಮಠದ ಆವರಣದಲ್ಲಿ ನಡೆಯುತ್ತಿದ್ದ ಮುದ್ದುಕೃಷ್ಣ ವೇಷ ಸ್ಪರ್ದೆಯ ಪುಟಾಣಿಗಳ ಜೊತೆ ಕೆಲಕಾಲ ಬೆರೆತು ಸಂಭ್ರಮಿಸಿದರು. ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಶಿವಣ್ಣರನ್ನು ಕಂಡು ಸೆಲ್ಫಿಗಾಗಿ ಮುಗಿಬಿದ್ದರು. ಉಡುಪಿ ಜಿಲ್ಲೆಯ ವಿವಿದೆಡೆ ಭರದಿಂದ ಸಾಗುತ್ತಿರುವ ಟಗರು ಚಿತ್ರೀಕರಣದ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ಜಿಲ್ಲೆಯಲ್ಲಿ ತಂಗಿದ್ದಾರೆ.

VIDEO

Share Information
Advertisement
Click to comment

You must be logged in to post a comment Login

Leave a Reply