Connect with us

    LATEST NEWS

    ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದೆ ಶೋಭಾ ಕರಂದ್ಲಾಜೆ ಸ್ಪರ್ಧೆ ಖಚಿತ

    ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದೆ ಶೋಭಾ ಕರಂದ್ಲಾಜೆ ಸ್ಪರ್ಧೆ ಖಚಿತ

    ಉಡುಪಿ ಮಾರ್ಚ್ 14 : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಟಿಕೆಟ್ ಪಕ್ಕ ಆಗಿದ್ದು, ಹಾಲಿ ಸಂಸದರೆ ಈ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

    ಶೃಂಗೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್ ಯಡಿಯೂರಪ್ಪ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದೆ ಶೋಭಾಕರಂದ್ಲಾಜೆ ಅವರೇ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದು, ಸಂಸದೆ ಶೋಭಾ ಕರಂದ್ಲಾಜೆ ಉಡುಪಿಯಲ್ಲಿ ಕಣಕ್ಕಿಳಿಯುವುದು ಬಹುತೇಕ ಪಕ್ಕ ಆಗಿದ್ದು. ಈ ಕ್ಷೇತ್ರದಲ್ಲಿ ಅಭ್ಯರ್ಥಿ ಬದಲಾವಣೆ ಇಲ್ಲ. ಶೋಭಾ ಅವರು ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಇಂದು ಚಿಕ್ಕಮಗಳೂರಿನ ಶೃಂಗೇರಿ ಶಾರದಾಂಬೆ ಸನ್ನಿಧಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿ ಶೃಂಗೇರಿ ಶಾರದಾ ಮಠದಲ್ಲಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.

    ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರೇ ಹಾಲಿ ಸಂಸದೆ ಮೇಲೆ ಅಸಮಧಾನ ಹೊಂದಿದ್ದು, ಗೋ ಬ್ಯಾಕ್ ಶೋಭಾ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದರು. ಅಲ್ಲದೆ ಬಿಜೆಪಿಯ ಐಟಿ ಸೆಲ್ ನ ಕೆಲವು ಯುವಕರು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಶೋಭಾ ಅವರಿಗೆ ಟಿಕೆಟ್ ನೀಡದಂತೆ ಮನವಿಯನ್ನು ಸಲ್ಲಿಸಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply