Connect with us

    DAKSHINA KANNADA

    ಪ್ರತೀ ತಾಲೂಕಿನಲ್ಲಿ ಕನಿಷ್ಟ ಒಂದು ಕೃಷಿ ಉತ್ಪಾದಕ ಸಂಘ -ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

    ಪುತ್ತೂರ ಅಗಸ್ಟ್ 23: ದೇಶದ ಎಲ್ಲಾ ಸಣ್ಣ ರೈತರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಪ್ರತೀ ತಾಲೂಕಿನಲ್ಲಿ ಕನಿಷ್ಟ ಒಂದು ಕೃಷಿ ಉತ್ಪಾದಕ ಸಂಘ ಆರಂಭಿಸಲಾಗುವುದು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.


    ಕೇಂದ್ರ ಸಚಿವರಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ತಮ್ಮ ತವರು ಜಿಲ್ಲೆಗೆ ಆಗಮಿಸಿದ ಶೋಭಾ ಕರಂದ್ಲಾಜೆಗೆ ಹುಟ್ಟೂರಿನ ಸನ್ಮಾನ ನೀಡಲಾಗಿತ್ತು. ಇದೇ ಸಂದರ್ಭದಲ್ಲಿ ಸಚಿವರು ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದರು.

    ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಭಾರತ ಸಣ್ಣ ರೈತರನ್ನೇ ಹೊಂದಿರುವ ದೇಶವಾಗಿದ್ದು, ದೇಶದ ಎಲ್ಲಾ ರೈತರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೃಷಿ ಉತ್ಪಾದಕ ಸಂಘವನ್ನು ಆರಂಭಿಸಲು ಸೂಚನೆ ನೀಡಿದ್ದಾರೆ.

    ದೇಶದ ಪ್ರತೀ ತಾಲೂಕಿನಲ್ಲಿ ಕನಿಷ್ಟ ಒಂದು ಕೃಷಿ ಉತ್ಪಾದಕ ಸಂಘದಂತೆ ದೇಶದಲ್ಲಿ ಸುಮಾರು 10 ಸಾವಿರ ಇಂಥಹ ಸಂಘಗಳು ಅಸ್ತಿತ್ವಕ್ಕೆ ಬರಲಿದ್ದು, ಇದಕ್ಕೆ ಬೇಕಾದ ಹಣಕಾಸಿನ ನೆರವನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಭರಿಸಲಿದೆ ಎಂದ ಅವರು ಕೃಷಿ ಬಜೆಟ್ ಹೊರತುಪಡಿಸಿ ಕೃಷಿಯ ಮೂಲಭೂತ ವ್ಯವಸ್ಥೆಗಾಗಿಯೇ ಕೇಂದ್ರ ಸರಕಾರ ಹೆಚ್ಚುವರಿ 1 ಲಕ್ಷ ಕೋಟಿ ರೂಪಾಯಿಗಳನ್ನು ತೆಗೆದಿರಿಸಿದ್ದು, ಕೃಷಿಯ ಮೂಲಭೂತ ವ್ಯವಸ್ಥೆಗಳಿಗಾಗಿ ಈ ಹಣ ವಿನಿಯೋಗಿಸಲಾಗುವುದು ಎಂದರು.


    ಕರಾವಳಿ ಭಾಗದ ಪ್ರಮುಖ ಬೆಳೆಯಾದ ಅಡಿಕೆಗೆ ಇದೀಗ ಮಾರುಕಟ್ಟೆಯಲ್ಲಿ ಉತ್ತಮ ಬೆಲೆಯಿದ್ದು, ವಿದೇಶಗಳಿಂದ ಅಡಿಕೆ ಆಮದನ್ನು ನಿಶೇಧ ಮಾಡಿದ ಪರಿಣಾಮ ಈ ಬೆಲೆ ಏರಿಕೆಗೆ ಕಾರಣವಾಗಿದೆ ಎಂದ ಅವರು ಮುಂದಿನ ದಿನಗಳಲ್ಲಿ ವಿದೇಶಗಳಿಂದ ಅಡಿಕೆ ಆಮದಾಗುವ ಸಾಧ್ಯತೆಯನ್ನು ಅವರು ಇದೇ ಸಂದರ್ಭದಲ್ಲಿ ಹೇಳಿದರು. ಅಡಿಕೆ ಬೆಳೆಗಾರರ ಪ್ರಮುಖ ಸಮಸ್ಯೆಯಾದ ಹಳದಿ ರೋಗ ತಡೆಯುವ ನಿಟ್ಟಿನಲ್ಲಿ ಸಂಶೋಧನೆಯನ್ನು ನಡೆಸಲು ಕೇಂದ್ರ ಸರಕಾರ ಚಿಂತನೆ ನಡೆಸಿದ್ದು, ಹಳದಿ ರೋಗ ತಡೆಗಟ್ಟಲು ಯಾವ ರಾಸಾಯನಿಕ ಬಳಸಬೇಕು ಎನ್ನುವ ನಿಟ್ಟಿನಲ್ಲೂ ಸಂಶೋಧನೆಗಳು ನಡೆಯಲಿದೆ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply